![](https://www.chandravallinews.com/wp-content/uploads/2023/12/WhatsApp-Image-2023-12-02-at-6.50.51-PM-1.jpeg)
i
ವಜ್ರ ಬಸ್ ಗಳಲ್ಲಿ ಸಂಚರಿಸಲು ವಿದ್ಯಾರ್ಥಿ ಬಸ್ ಪಾಸ್ ವಿತರಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಮಹಾನಗರ ಸರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಉಚಿತ / ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಜ್ರ ಸೇವೆಗಳಲ್ಲಿ ಪ್ರಯಾಣಿಸಲು ವಜ್ರ ಮಾಸಿಕ ಪಾಸಿನ ದರ ರೂ. 1800 ರಲ್ಲಿ ರಿಯಾಯಿತಿನ್ನು ಕಲ್ಪಿಸಿ ರೂ. 1200 ರಂತೆ ವಿತರಣೆ ಮಾಡಲು ಕ್ರಮ ಕೈಗೊಂಡಿರುತ್ತದೆ. ವಜ್ರ ಪಾಸ್ಗಳನ್ನು ಹೊಂದಿದ ವಿದ್ಯಾರ್ಥಿಗಳು ಸಂಸ್ಥೆಯ ಎಲ್ಲಾ ಸಾಮಾನ್ಯ ಸೇವೆಗಳಲ್ಲಿ ಮತ್ತು ವಜ್ರ ಸೇವೆಗಳಲ್ಲಿ ಅನಿಯಮಿತವಾಗಿ ಪ್ರಯಾಣಿಸಬಹುದಾಗಿರುತ್ತದೆ. ವಜ್ರ ವಿದ್ಯಾರ್ಥಿ ಪಾಸ್ಗಳನ್ನು ಪಡೆಯಲು ಸಂಸ್ಥೆಯ ಜಾಲತಾಣ www.mybmtc.karnataka.gov.in ನಲ್ಲಿ ಅರ್ಜಿಯನ್ನು ಮುದ್ರಿಸಿಕೊಳ್ಳುವುದು ನಂತರ ಅರ್ಜಿಯನ್ನು ಭರ್ತಿ ಮಾಡಿ ಸಂಬಂಧಿಸಿದ ಶಾಲಾ / ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಿಸಿ ಕೆಂಪೇಗೌಡ ಬಸ್ ನಿಲ್ದಾಣ, ಬನಶಂಕರಿ ಟಿಟಿಎಂಸಿ, ವೈಟ್ಫೀಲ್ಡ್ ಟಿಟಿಎಂಸಿ, ಹೆಬ್ಬಾಳ, ಕೆಂಗೇರಿ ಟಿಟಿಎಂಸಿ, ಶಿವಾಜಿನಗರ ಬಸ್ನಿಲ್ದಾಣ, ಕಾಡುಗೋಡಿ ಬಸ್ ನಿಲ್ದಾಣ, ಘಟಕ – 19 ಎಲೆಕ್ಟ್ರಾನಿಕ್ ಸಿಟಿ, ಯಲಹಂಕ ಹಳೆ ಬಸ್ನಿಲ್ದಾಣ, ಶಾಂತಿನಗರ ಟಿಟಿಎಂಸಿ ಮತ್ತು ಸರ್ಜಾಪುರ ಬಸ್ ನಿಲ್ದಾಣ ಇಲ್ಲಿ ಪಾಸಿನ ಮೊತ್ತವನ್ನು ಪಾವತಿಸಿ ಸಂಬಂಧಿಸಿದ ಶಾಲಾ / ಕಾಲೇಜು ಮುಖ್ಯಸ್ಥರಿಂದ ದೃಢೀಕರಿಸಿದ ಅರ್ಜಿಯನ್ನು ಸಲ್ಲಿಸಿ ವಜ್ರ ವಿದ್ಯಾರ್ಥಿ ಪಾಸ್ನ್ನು ಪಡೆಯಬಹುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.