![](https://www.chandravallinews.com/wp-content/uploads/2023/12/WhatsApp-Image-2023-12-04-at-7.48.32-PM-1024x621.jpeg)
i
ಚಿತ್ರದುರ್ಗದಲ್ಲಿ ಬಾಲಕನ ಮೇಲೆ ನಾಯಿಗಳ ದಾಳಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಜೆಸಿಆರ್ ಬಡಾವಣೆಯಲ್ಲಿ ಬಾಲಕನ ಮೇಲೆ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ.ಗಾಯಗೊಂಡಿರುವ ಬಾಲಕ ಸಾಯಿ ಚರಣ್ (6) ಎಂದು ತಿಳಿದು ಬಂದಿದೆ. ಮನೆ ಮುಂದೆ ಆಟವಾಡುತ್ತಿದ್ದ ವೇಳೆ ನಾಯಿ ದಾಳಿ ಮಾಡಿದೆ. ಜ್ಯೋತಿ-ನಾಗರಾಜ್ ದಂಪತಿಯ ಪುತ್ರ ಸಾಯಿ ಚರಣ್ ಎನ್ನಲಾಗಿದೆ. 2 ನಾಯಿಗಳು 11 ಕಡೆ ಬಾಲಕನಿಗೆ ಕಚ್ಚಿ ಗಾಯಗೊಳಿಸಿದ್ದು ನಾಯಿಗಳಿಂದ ಬಾಲಕನ ರಕ್ಷಣೆಗೆ ಸ್ಥಳೀಯರ ಹರಸಾಹಸ ಪಡೆದಿದ್ದಾರೆ. ಬಾಲಕ ಸದ್ಯ ಪ್ರಾಣಾಪಾಯದಿಂದ ಬಚಾವ್ ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ನಾಯಿಗಳ ಹಾವಳಿ ತಡೆಯದೆ ನಿರ್ಲಕ್ಷಿಸಿದ ನಗರಸಭೆ ವಿರುದ್ಧ ಸಾರ್ವಜನಿಕರು ಹಿಡಿಶಾಪ ಹಾಕಿ ನಾಯಿಗಳ ಹಾವಳಿ ತಡೆಯುವಂತೆ ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.