![](https://www.chandravallinews.com/wp-content/uploads/2023/12/WhatsApp-Image-2023-12-04-at-7.12.39-AM-1024x609.jpeg)
i
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶಿಕ್ಷಕಿ ರೂಪಾದೇವಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ೨೦೨೩-೨೪ ನೇ ಸಾಲಿನ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮವನ್ನು ಕ.ರಾ.ಶಿ.ಕ.ನಿಧಿ ಬೆಂಗಳೂರು ಹಾಗೂ ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಚಿತ್ರದುರ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಗಿತ್ತು. ಪ್ರೌಢಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ತುರುವನೂರು ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲೆಯ ಶಿಕ್ಷಕಿ ರೂಪಾದೇವಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಶಿಕ್ಷಕಿಗೆ ಜಿಲ್ಲಾ ನೋಡಲ್ ಅಧಿಕಾರಿ ಎಚ್. ಗೋವಿಂದಪ್ಪ ಪ್ರಶಸ್ತಿ ಪತ್ರ, ನಗದು ಬಹುಮಾನ ವಿತರಿಸಿದರು. ತೀರ್ಪುಗಾರರಾದ ಎಸ್.ಬಸವರಾಜು, ಮಾರುತಿ, ಏಕನಾಥ್, ಮಹೇಶ್ ಇದ್ದರು.