i
ಮುಂಬರುವ ಲೋಕಸಭೆ ಚುನಾವಣೆಗೆ ಐದು ರಾಜ್ಯಗಳ ಫಲಿತಾಂಶ ಸ್ಪಷ್ಟ ದಿಕ್ಸೂಚಿ-ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ತಾನ ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಭಾರತೀಯ ಜನತಾ ಪಾರ್ಟಿ ಹಾಗೂ ಆ ಪಕ್ಷದ ಎಲ್ಲಾ ನಾಯಕರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಬಲಿಷ್ಠ ನಾಯಕತ್ವದಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ವಿಜಯ ಪತಾಕೆ ಹಾರಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಈ ಫಲಿತಾಂಶ ಸ್ಪಷ್ಟ ದಿಕ್ಸೂಚಿ ಆಗಿದೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.