i
ನ್ಯಾಯಾಲಯಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ– ಸಚಿವ ಸತೀಶ್ ಜಾರಕಿಹೊಳಿ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ ಸುವರ್ಣಸೌಧ:
ರಾಜ್ಯದಲ್ಲಿರುವ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ವಿಧಾನಪರಿಷತ್ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪ್ರಸಕ್ತ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯಿಂದ 623.96 ಕೋಟಿ ರೂ ಮೊತ್ತದಲ್ಲಿ ನ್ಯಾಯಾಲಯ ಕಟ್ಟಡ ಹಾಗೂ ನ್ಯಾಯಾಂಗ ಅಧಿಕಾರಿಗಳ ವಸತಿ ಸಮುಚ್ಛಯ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಈ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.
ನ್ಯಾಯಾಲಯ ಕಟ್ಟಡ ಹಾಗೂ ವಸತಿಗೃಹಗಳ ನಿರ್ವಹಣೆ ಕಾಮಗಾರಿಗಳನ್ನು ಸಹ ಲೋಕೋಪಯೋಗಿ ಇಲಾಖೆ ಕಟ್ಟಡಗಳ ನಿರ್ವಹಣೆಯಡಿ ಒದಗಿಸಿದ ಅನುದಾನದಲ್ಲಿ ಕೈಗೆತ್ತಿಕೊಂಡು ಸುಸ್ಥಿತಿಯಲ್ಲಿಡಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.