i
ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲಿ ಪ್ರಥಮ- ಕೆಎಂಎಫ್ ನಿರ್ದೇಶಕ ವೀರಭದ್ರಬಾಬು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇತ್ತೀಚಿನ ದಿನಗಳಲ್ಲಿ ಭಾರತ ದೇಶ ಹೈನುಗಾರಿಕೆಯಲ್ಲಿ ಗಣನೀಯ ಪ್ರಮಾಣದಲ್ಲಿ ಪ್ರಗತಿ ಸಾಧಿಸಿದೆ. ಇದರಿಂದಾಗಿ ಭಾರತ ದೇಶ ಹಾಲು ಉತ್ಪಾದನೆಯಲ್ಲಿ ವಿಶ್ವದಲ್ಲಿ ಪ್ರಥಮ ರಾಷ್ಟ್ರವೆನಿಸಿದೆ ಎಂದು ಸಹಕಾರ ರತ್ನ ಪುರಸ್ಕøತರು ಹಾಗೂ ಕೆಎಂಎಫ್ ನಿರ್ದೇಶಕ ವೀರಭದ್ರಬಾಬು ಹೇಳಿದರು.
ಹೊಸದುರ್ಗ ಎಪಿಎಂಸಿ ಆವರಣದ ರೈತ ಭವನದಲ್ಲಿ ಬುಧವಾರ ಸಹಕಾರ ಇಲಾಖೆ, ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಹಮ್ಮಿಕೊಂಡಿದ್ದ ಹೊಸದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕುಗಳಲ್ಲಿ ಬರುವ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೈನು ಉದ್ಯಮ ಹೆಚ್ಚಿನ ಪ್ರಗತಿ ಸಾಧಿಸಬೇಕಾದರೆ ಹಾಲಿನ ಉತ್ಕøಷ್ಟ ಗುಣಮಟ್ಟ ಹೊಂದಿರಬೇಕು ಎಂದು ತಿಳಿಸಿದರು.
ಸಹಕಾರ ರತ್ನ ಪುರಸ್ಕøತರು ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಿಂಕಲ್ ಬಸವರಾಜ್ ಮಾತನಾಡಿ, ಸಹಕಾರ ಸಂಘಗಳ ಕಾರ್ಯದರ್ಶಿಗಳು, ಅಧ್ಯಕ್ಷರು ಇಂತಹ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಈ ತರಬೇತಿಯ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಹಕಾರ ಸಂಘಗಳ ಅಭಿವೃದ್ಧಿಗೆ ಸಂಘದ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಾಹಕರ ಜವಾಬ್ದಾರಿ, ಕರ್ತವ್ಯ ಬಹಳ ಮುಖ್ಯವಾಗಿದೆ. ಈ ತರಬೇತಿಯಲ್ಲಿ ಇತ್ತೀಚಿನ ಕಾನೂನು, ಲೆಕ್ಕಪತ್ರಗಳನ್ನು ಈ ತರಬೇತಿ ಕಾರ್ಯಕ್ರಮದ ಮೂಲಕ ತಿಳಿದುಕೊಳ್ಳಬೇಕು ಹಾಗೂ ಇಂತಹ ತರಬೇತಿಯ ಸದುಪಯೋಗಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಶಿವಮೊಗ್ಗ ಹಾಲು ಒಕ್ಕೂಟ ನಿರ್ದೇಶಕ ಜಿ.ಪಿ.ಯಶವಂತರಾಜ್ ಮಾತನಾಡಿ, ನಮ್ಮ ದೇಶ ಹಾಲು ಗುಣಮಟ್ಟ, ಹಾಲು ಉತ್ಪಾದನೆಯಲ್ಲಿ ಮೊದಲನೇ ಸ್ಥಾನದಲ್ಲಿದ್ದು, ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.
ಚಿತ್ರದುರ್ಗ ಮತ್ತು ಹೊಸದುರ್ಗ ತಾಲ್ಲೂಕುಗಳಲ್ಲಿ ಹಾಲು ಜಾಸ್ತಿ ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳು ಲೆಕ್ಕಪರಿಶೋಧನೆಗೆ ಹೆಚ್ಚು ಗಮನ ನೀಡಬೇಕು. ಲೆಕ್ಕಪತ್ರಗಳು ಸರಿಯಾಗಿ ನಿರ್ವಹಣೆ ಮಾಡಬೇಕು. ಇಂತಹ ತರಬೇತಿ ಕಾರ್ಯಕ್ರಮಗಳಲ್ಲಿ ಇದರ ಬಗ್ಗೆ ಮಾಹಿತಿ ಪಡೆದು, ತಿಳಿದುಕೊಂಡು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಹಕಾರ ರತ್ನ ಪುರಸ್ಕøತರು ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಿ.ಈ.ಅಜ್ಜಪ್ಪ ಮಾತನಾಡಿ, ಹಾಲು ಉತ್ಪಾದಕರ ಸಹಕಾರ ಸಂಘಗಳು ಈ ಬಾರಿಯ ಸಹಕಾರಿ ಸಪ್ತಾಹವನ್ನು ಯಶಸ್ವಿಯಾಗಿ ನೆರವೇರಿಸಿರುವುದು ಸಂತಸ ಉಂಟುಮಾಡಿದೆ ಎಂದು ತಿಳಿಸಿದ ಅವರು, ಹೊಸದುರ್ಗ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ವಿಸ್ತರಣಾಧಿಕಾರಿ ಕೃಷ್ಣಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದರು.
ಶಿವಮೊಗ್ಗ ಹಾಲು ಒಕ್ಕೂಟ ನಿರ್ದೇಶಕಿ ಭಾಗ್ಯ ಕಾಂತರಾಜ್ ಮಾತನಾಡಿ, ಹಾಲು ಉತ್ಪಾದಕರು ಶುಚಿಯಾಗಿ ಶುದ್ಧವಾಗಿ ಹಾಲು ಶೇಖರಣೆ ಮತ್ತು ಉತ್ಪಾದನೆ ಮಾಡಬೇಕೆಂದು ತಿಳಿಸಿದರು.
ಶಿವಮೊಗ್ಗ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ಮಾತನಾಡಿ, ಜಿಲ್ಲಾ ಸಹಕಾರ ಯೂನಿಯನ್ ಅವರು ಸಹಕಾರ ಕ್ಷೇತ್ರದಲ್ಲಿ ಸಹಕಾರ ಶಿಕ್ಷಣ, ಪ್ರಚಾರ ಕೆಲಸ ನಿರ್ವಹಿಸುತ್ತಿದ್ದು, ಈ ರೀತಿ ತರಬೇತಿ ಕಾರ್ಯಕ್ರಮಗಳನ್ನು ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಮತ್ತು ಆಡಳಿತ ಮಂಡಳಿಯವರಿಗೆ ನಿರಂತರವಾಗಿ ನೀಡಬೇಕು ಕಾರ್ಯದರ್ಶಿಗಳಿಗೆ ಮತ್ತು ಆಡಳಿತ ಮಂಡಳಿಯವರಿಗೆ ಸಹಕಾರ ಸಂಘಗಳ ಕಾಯ್ದೆ ಕಾನೂನು ಬಗ್ಗೆ ಇತ್ತೀಚಿನ ತಿದ್ದುಪಡಿಗಳ ಬಗ್ಗೆ ಮತ್ತು ಲೆಕ್ಕಪರಿಶೋಧನೆ ಬಗ್ಗೆ ಮಾಹಿತಿ ನೀಡಬೇಕು ಇದು ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಅತಿ ಅವಶ್ಯಕವಾಗಿದೆ ಎಂದರು.
ನಮ್ಮ ರಾಜ್ಯ ಹಾಲು ಉತ್ಪಾದನೆಯನ್ನು ಅತಿ ಹೆಚ್ಚು ಹಾಲು ಉತ್ಪಾದನೆಯನ್ನು ಮಾಡಿ 24,000 ಕೋಟಿ ವಹಿವಾಟು ಮಾಡಿದೆ. ಶೇ.13.5 ಹಾಲು ಉತ್ಪಾದನೆ ಜಾಸ್ತಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸದುರ್ಗ ತಾಲ್ಲೂಕು ಶೇ.99ರಷಉ ಗುಣಮಟ್ಟದ ಹಾಲನ್ನು ಉತ್ಪಾದನೆ ಮಾಡಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾತೃಶ್ರೀ ಎನ್.ಮಂಜುನಾಥ್, ರಾಜ್ಯದ ಗದಗ ಜಿಲ್ಲೆ ಕಣಗಿನಹಾಳ್ ಗ್ರಾಮದ ಸಿದ್ದನಗೌಡ ಸಣ್ಣ ರಾಮನಗೌಡ ಪಾಟೀಲ್ ಅವರು ಪ್ರಪ್ರಥಮವಾಗಿ ಸಹಕಾರ ಸಂಘ ಸ್ಥಾಪಿಸಿ ಸಹಕಾರ ಚಳುವಳಿ ಪ್ರಾರಂಭ ಮಾಡಿದರು. ಹಾಗಾಗಿ ಇವರನ್ನು ಸಹಕಾರ ಪಿತಾಮಹ ಎಂದು ಕರೆಯಲಾಗಿದೆ. 6.44 ಲಕ್ಷ ಸಹಕಾರ ಸಂಘಗಳ ನಡೆಯುತ್ತಿದ್ದು, ಸಹಕಾರ ಕ್ಷೇತ್ರದಲ್ಲಿ ಎರಡನೇ ಸ್ಥಾನ ಕರ್ನಾಟಕ ರಾಜ್ಯ ಪಡೆದಿದೆ ಎಂದರು.
“ಶುದ್ಧ ಹಾಲು ಉತ್ಪಾದನೆ ಹಾಗೂ ಗುಣಮಟ್ಟ ಕಾಪಾಡಿಕೊಳ್ಳುವುದು ಮತ್ತು ಇತ್ತೀಚೆಗೆ ತಿದ್ದುಪಡೆಯಾದ ಕಾನೂನಿನ ಮುಖ್ಯಾಂಶಗಳನ್ನು ಭೈಲಾದಲ್ಲಿ ಅಳವಡಿಸಿಕೊಳ್ಳುವ ಕುರಿತು ಹಾಗೂ ಸಹಕಾರ ಸಂಘಗಳಲ್ಲಿ ಆಡಳಿತ ಹಾಗೂ ಲೆಕ್ಕಪತ್ರ ನಿರ್ವಹಣೆ” ಕುರಿತು ಶಿಮುಲ್ ನಿವೃತ್ತ ಸಹಾಯಕ ವ್ಯವಸ್ಥಾಪಕರಾದ ಶೇಖರಪ್ಪ, ಶಿವಾನಂದಪ್ಪ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿವಾರ್ಹಕ ಅಧಿಕಾರಿ ನಾಗರಾಜ್ ಪಾಟೀಲ್, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ ಸಹಾಯಕ ನಿರ್ದೇಶಕ ಪಿ.ಅಂಜನಮೂರ್ತಿ, ಶಿಮುಲ್ ಉಪ ವ್ಯವಸ್ಥಾಪಕ ಕೆ.ಪಿ.ಸಂಜಯ್, ಹೊಸದುರ್ಗ ವಿಭಾಗ ವ್ಯವಸ್ಥಾಪಕ ತಿಪ್ಪೇಸ್ವಾಮಿ, ವಿಸ್ತರಣಾಧಿಕಾರಿಗಳಾದ ಕೃಷ್ಣಪ್ಪ, ರಂಜಿತಾ ಇದ್ದರು.