![](https://www.chandravallinews.com/wp-content/uploads/2023/12/8CLK4C.jpg)
i
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆ ತಾಲ್ಲೂಕಿನ ಯಲಗಟ್ಟೆಯಲ್ಲಿ ಗೃಹಿಣಿ ತನ್ನ ಎರಡೂ ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ, ನಂತರ ತಾನೂ ಬಚ್ಚಲು ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಯಲಗಟ್ಟೆ ಗ್ರಾಮದ ತಿಪ್ಪೇಸ್ವಾಮಿ ಎಂಬುವವರ ಪತ್ನಿ ಲತಾ(25), ತನ್ನ ಮಕ್ಕಳಾದ ಪ್ರಣೀತಾ(5), ಒಂದೂವರೆ ವರ್ಷ ಹಸಿಗೂಸು ಜ್ಞಾನೇಶ್ವರನನ್ನು ಮನೆಯ ಬಚ್ಚಲಿನಲ್ಲಿದ್ದ ನೀರಿನ ತೊಟ್ಟಿಯಲ್ಲಿ ಮುಳುಗಿಸಿ ನಂತರ ತಾನು ನೇಣುಹಾಕಿಕೊಂಡು ಮೃತಪಟ್ಟಿರುತ್ತಾಳೆ. ಈ ಸಂದರ್ಭದಲ್ಲಿ ಗಂಡ ತಿಪ್ಪೇಸ್ವಾಮಿ ತನ್ನ ತೋಟಕ್ಕೆ ಹೋಗಿದ್ದು ವಿಷಯ ತಿಳಿದು ಗಾಬರಿಯಾಗಿ ಸ್ಥಳಕ್ಕೆ ಬಂದು ನೋಡಿದಾಗ ತನ್ನ ಮಕ್ಕಳು ಹಾಗೂ ಹೆಂಡತಿ ಮೃತಪಟ್ಟಿರುತ್ತಾಳೆ. ಗಾಬರಿಗೊಂಡ ತಿಪ್ಪೇಸ್ವಾಮಿ ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ತಂದು ದಾಖಲಿಸಿದಾಗ ಪರೀಕ್ಷೆ ನಡೆಸಿದ ವೈದ್ಯರು ಮಕ್ಕಳು ಹಾಗೂ ಪತ್ನಿ ಮೃತಪಟ್ಟಿರುವುದಾಗಿ ತಿಳಿಸಿದ್ಧಾರೆ. ಗ್ರಾಮದಲ್ಲಿ ನಡೆದ ಈ ಘಟನೆ ಗ್ರಾಮಸ್ಥರಲ್ಲಿ ಕಳವಳ ಉಂಟು ಮಾಡಿದ್ದು ಗ್ರಾಮದಲ್ಲಿ ನೀರವಮೌನ ಆವರಿಸಿದೆ. ಪತ್ನಿ ಲತಾ ಹಾಗೂ ಮಕ್ಕಳ ಸಾವಿನ ಬಗ್ಗೆ ಲತಾಳ ಬಂಧುಗಳು ಪೊಲೀಸರಿಗೆ ದೂರು ನೀಡಿರುತ್ತಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.