i
ಕಾಡುಗೊಲ್ಲರಿಗೆ ಎಸ್ಟಿ ಸೌಲಭ್ಯ ಕಲ್ಪಿಸಲು ದೇವೇಗೌಡರಿಂದ ಅಮಿತ್ ಶಾ ಗೆ ಪತ್ರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆರ್ಥಿಕ ಸಾಮಾಜಿಕ ರಾಜಕೀಯ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಕಾಡುಗೊಲ್ಲ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರವರು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ರವರಿಗೆ ಪತ್ರ ಬರೆಯುವ ಮೂಲಕ ತಳ ಸಮುದಾಯದವರಿಗೆ ಸಾಮಾಜಿಕ ನ್ಯಾಯದ ಬೆನ್ನೆಲುಬಾಗಿ ನಿಂತಿರುವ ದೇವೇಗೌಡ ಅಪ್ಪಾಜಿ ಯವರಿಗೆ ಕಾಡುಗೊಲ್ಲ ಸಮಾಜದ ಪರವಾಗಿಲ್ಲ ನಗರಸಭಾ ಸದಸ್ಯ ಚಿತ್ರಜಿತ್ ಯಾದವ್ ಅನಂತ ಅನಂತ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಕೆಲವೇ ದಿನಗಳಲ್ಲಿ ದೇವೇಗೌಡರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯ ಕಾಡುಗೊಲ್ಲ ಸಮಾಜದ ಮುಖಂಡರೊಂದಿಗೆ ದೆಹಲಿಗೆ ತೆರಳಿ ಕಾಡುಗೊಲ್ಲ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಮನವಿ ಮಾಡಲಾಗುವುದು ಎಂದು ಮಾಜಿ ಉಪ ಮೇಯರ್ ಹಾಗೂ ಜೆ.ಡಿ.ಎಸ್ ರಾಜ್ಯ ಉಪಾಧ್ಯಕ್ಷ ನರಸಿಂಹ ಮೂರ್ತಿ (ಸಿಂಹ) ತಿಳಿಸಿದ್ದಾರೆ.