i
ರೈತರಿಗೆ ಬೆಳೆ ವಿಮೆ ಸೇರಿದಂತೆ ಹೆಚ್ಚಿನ ಪರಿಹಾರ ನೀಡಲು ಶೀಘ್ರ ಸಿಎಂ ನೇತೃತ್ವದ ಸಭೆ:ಶಾಸಕ ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆ ತಾಲ್ಲೂಕು ಸೇರಿದಂತೆ ರಾಜ್ಯಾಧ್ಯಂತ ಬರದ ಹಿನ್ನೆಲ್ಲೆಯಲ್ಲಿ ರೈತರಿಗೆ ಬೆಳೆ ವಿಮೆ ಹಾಗೂ ಇನ್ನಿತರ ಸೌಲಭ್ಯ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ಧಾರೆಂದು ಶಾಸಕ ಟಿ.ರಘುಮೂರ್ತಿ ಮಾಹಿತಿ ನೀಡಿದರು. ಅವರು, ಬೆಳಗಾವಿಯ ಸುವರ್ಣಸೌಧದಲ್ಲಿ ರೈತರ ಬೆಳೆ ವಿಮೆ ಕುರಿತು ಕೃಷಿ ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ನಂತರ ಸಭೆಯಲ್ಲಿ ಚರ್ಚೆಯಾದ ವಿಷಯದ ಬಗ್ಗೆ ಪತ್ರಿಕೆಗೆ ಮಾಹಿತಿ ನೀಡಿದರು. ರಾಜ್ಯದಲ್ಲಿ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಒತ್ತಡ ಹೇರಲಾಗುವುದು ಎಂದು ಅವರು ತಿಳಿಸಿದರು. ಸಭೆಯಲ್ಲಿ ಸಚಿವರಾದ ಈಶ್ವರಖಂಡ್ರೆ, ಶರಣಪ್ರಕಾಶ್ಪಾಟೀಲ್, ಪ್ರಿಯಾಂಕಖರ್ಗೆ, ಶರಣಬಸಪ್ಪ ಗೌಡ ದರ್ಶನಪುರ, ಶಾಸಕರಾದ ಟಿ.ರಘುಮೂರ್ತಿ, ಕೋನಾರೆಡ್ಡಿ, ದರ್ಶನ್ಪುಟ್ಟಣ್ಣಯ್ಯ ಪಾಲ್ಗೊಂಡಿದ್ದರು.