i
ಬಯಲು ಸೀಮೆ ಅಡಿಕೆ ಬೆಳೆಗೆ ಪ್ರೋತ್ಸಾಹ ನೀಡಲು ಒತ್ತಾಯ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಮಲೆನಾಡಿನ ಪ್ರದೇಶದಲ್ಲಿ ಅಡಿಕೆ ಬೆಳೆಗೆ ನೀಡುತ್ತಿರುವ ಪ್ರೋತ್ಸಾಹ ಹಾಗೂ ವಿಮೆ ಸೌಲಭ್ಯಗಳನ್ನು ಬಯಲು ಸೀಮೆ ಅಡಿಕೆ ಬೆಳೆಗಾರರಿಗೂ ನೀಡಬೇಕು ಎಂದು ಶಾಸಕ ಪ್ರಕಾಶ್ ಕೋಳಿವಾಡ ಒತ್ತಾಯಿಸಿದರು.
ಬೆಳಗಾವಿ ಚಳಿಗಾಲದ ಅಧಿವೇಶನಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸರ್ಕಾರ ಉತ್ತರಿಸುವ ವೇಳೆ ಮಾತನಾಡಿದರು.
ರಾಣೆಬೆನ್ನೂರು ತಾಲ್ಲೂಕಿನಲ್ಲಿ ಸುಮಾರು 7000 ಎಕೆರೆ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಈ ಬೆಳೆಗೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ, ಡ್ರಿಪ್ ಅಳವಡಿಕೆ ಸೇರಿದಂತೆ ಬೆಳೆ ವಿಮೆ ಸೌಲಭ್ಯಗಳು ಇಲ್ಲ. ಇದರಿಂದ ಕ್ಷೇತದ್ರ ಅಡಿಕೆ ಬೆಳಗಾರರಿಗೆ ಅನ್ಯಾಯವಾಗುತ್ತಿದೆ. ಬಯಲು ಸೀಮೆಯ ಚೆನ್ನಗಿರಿ ಹಾಗೂ ಶಿಗ್ಗಾಂವ ತಾಲ್ಲೂಕುಗಳ ರೈತರಿಗೆ ಈ ಯೋಜನೆಗಳ ಸರ್ಕಾರ ವಿಸ್ತರಿಸಿದೆ. ಅಡಿಕೆ ಬೆಳೆಯುವ ರೈತರು ಇದರ ಲಾಭ ಪಡೆಯುತ್ತಿದ್ದಾರೆ. ಹಾವೇರಿ, ರಾಣೇಬೆನ್ನೂರು ಸೇರಿದಂತೆ ಪ್ರಮುಖವಾಗಿ ಅಡಿಕೆ ಬೆಳೆಯುವ ರಾಜ್ಯದ ಎಲ್ಲಾ ತಾಲ್ಲೂಕುಗಳಿಗೂ ಯೋಜನೆಯನ್ನು ವಿಸ್ತರಿಸುವಂತೆ ಸರ್ಕಾರಕ್ಕೆ ಕೋರಿದರು.
ಶಾಸಕ ಪ್ರಕಾಶ್ ಕೋಳಿವಾಡ ಅವರ ಪ್ರಶ್ನೆಗೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಯವರು ಸಹ ಧ್ವನಿ ಗೂಡಿಸಿದರು.
ತೋಟಗಾರಿಕೆ ಇಲಾಖೆ ಸಚಿವರಿಗೆ ಪರವಾಗಿ ಉತ್ತರಿಸಿದ ಉತನ್ನ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಸಾಂಪ್ರದಾಯಕವಾಗಿ ಅಡಿಕೆ ಬೆಳೆಯುವ ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಸರ್ಕಾರ ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮೈದಾನ ಪ್ರದೇಶಗಳಲ್ಲಿ ನೀರಿನ ಕೊರತೆ ಇರುವುದರಿಂದ ಅಡಿಕೆ ಬೆಳೆಯುವುದು ಸೂಕ್ತವಲ್ಲ. ಈ ಹಿನ್ನಲೆಯಲ್ಲಿ ಬಯಲು ಸೀಮೆ ಭಾಗದಲ್ಲಿ ತೋಟಗಾರಿಕೆ ಇಲಾಖೆ ಅಡಿಕೆ ಬದಲಿಗೆ ಪರ್ಯಾಯ ಬೆಳೆಗೆ ಪ್ರೋತ್ಸಾಹ ನೀಡುತ್ತಿದೆ. ಇದರ ಹೊರತಾಗಿಯೂ ಬಯಲು ಸೀಮೆಯಲ್ಲಿ ರೈತರು ಸ್ವ ಇಚ್ಛೇಯಿಂದ ಅಡಕೆ ಬೆಳೆಯುತ್ತಿದ್ದಾರೆ. ಶಾಸಕರ ಮನವಿಯನ್ನು ತೋಟಗಾರಿಕೆ ಇಲಾಖೆ ಸಚಿವರ ಗಮನಕ್ಕೆ ತರುವುದಾಗಿ ತಿಳಿಸಿದರು.