i
ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಗಣ್ಯ ವ್ಯಕ್ತಿಗಳ ನಾಮಕರಣ ಕೇಂದ್ರಕ್ಕೆ ಶಿಫಾರಸ್ಸು…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಹುಬ್ಬಳ್ಳಿ -ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ-ಕಿತ್ತೂರು ರಾಣಿ ಚನ್ನಮ್ಮ, ಶಿವಮೊಗ್ಗ-ಕೆ.ವಿ.ಪುಟ್ಟಪ್ಪ (ಕುವೆಂಪು) ವಿಜಯಪುರ- ಜಗಜ್ಯೋತಿ ಬಸವೇಶ್ವರ ಈ ನಾಲ್ಕು ಹೆಸರುಗಳನ್ನು ನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕಳುಹಿಸಲು ಕಾನೂನು, ನ್ಯಾಯ, ಮಾನವ ಹಕ್ಕುಗಳು ,ಶಾಸನ ರಚನೆ, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ನಿರ್ಣಯ ಮಂಡಿಸಿದರು. ನಿರ್ಣಯಕ್ಕೆ ವಿಧಾನಪರಿಷತ್ತು ಸರ್ವಾನುಮತದ ಅಂಗೀಕಾರ ಸೂಚಿಸಿತು.