i
ತೇರು ಮಲ್ಲೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿ ಹೆಚ್ ಡಿಕೆ ಜನ್ಮಾದಿನಾಚರಿಸಿದ ಕಾರ್ಯಕರ್ತರು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರದ ದಕ್ಷಿಣ ಕಾಶಿ ಶ್ರೀತೇರು ಮಲ್ಲೇಶ್ವರ ದೇವಸ್ಥಾನದಲ್ಲಿ ಹಿರಿಯೂರು ತಾಲೂಕು ಜೆಡಿಎಸ್ ಪಕ್ಷದ ವತಿಯಿಂದ ಅಪಾರ ಕಾರ್ಯಕರ್ತರು ಮುಖಂಡರು ಅಭಿಮಾನಿಗಳು ಜೆಡಿಎಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಜನಪ್ರಿಯ ಮಾಜಿ ಮುಖ್ಯಮಂತ್ರಿಗಳು ದೀನ ದಲಿತರ ಬಂಧು ಹೆಚ್ ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಶ್ರೀಸ್ವಾಮಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಸಿಹಿ ಹಂಚುವುದರ ಮೂಲಕ ಜನ್ಮದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಾಡ ದೊರೆ ಎಚ್ ಡಿ ಕುಮಾರಸ್ವಾಮಿ ರವರಿಗೆ ಇನ್ನೂ ಹೆಚ್ಚಿನ ಆರೋಗ್ಯ ಆಯಸ್ಸು, ಸಕಲ ಐಶ್ವರ್ಯಗಳನ್ನು ಕಲ್ಪಿಸಿ ಈ ನಾಡಿಗೆ ಇನ್ನೂ ಹೆಚ್ಚಿನ ಸೇವೆ ಸಲ್ಲಿಸಲು ಶಕ್ತಿಯನ್ನು ನೀಡಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಹನುಮಂತರಾಯಪ್ಪ ಸೇರಿದಂತೆ ಮತ್ತಿತರರು ಪ್ರಾರ್ಥಿಸಿದರು.