i
ಶೋಷಿತ ಎಸ್ಸಿ ಎಸ್ಟಿ ಮಕ್ಕಳ ಬೇಡಿಕೆಗಳನ್ನು ಈಡೇರಿಸಲು ಸಚಿವರಿಗೆ ಮನವಿ…
ಚಂದ್ರವಳ್ಳಿ ನ್ಯೂಸ್ ಹಿರಿಯೂರು:
ನಗರದ ಪ್ರವಾಸಿ ಮಂದಿರ ಸಮೀಪದಲ್ಲಿ ಪರಿಶಿಷ್ಠ ಜಾತಿ/ಪಂಗಡದ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಮಾತನಾಡಿ ಶೋಷಿತ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಬೇಕೆಂಬ ಮನಸ್ಸು ಸರಕಾರಕ್ಕೆ ಇದ್ದರೂ ತೀರ್ಮಾನ ಕೈಗೊಳ್ಳಲು ವಿಳಂಭ ಮಾಡುತ್ತಿರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಅಗುತ್ತಿದೆ. ಆದ್ದರಿಂದ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳಾದ ಪೇಮೆಂಟ್ ಸೀಟ್ನಲ್ಲಿ ಪ್ರವೇಶ ಪಡೆದು ವಿದ್ಯಾಭ್ಯಾಸ ಮಾಡುತ್ತಿರುವ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಈಗಾಗಲೇ ಅರ್ಧ ವಾರ್ಷಿಕ ಮುಗಿದಿರುವುದರಿಂದ ಮಕ್ಕಳ ಸ್ಥಿತಿ ಅತಂತ್ರವಾಗಿದೆ. ಆದ್ದರಿಂದ ತತಕ್ಷಣವೇ ಹಾಸ್ಟೆಲ್ ಸೌಲಭ್ಯ ನೀಡಬೇಕು. ಪರಿಶಿಷ್ಟ ಜಾತಿ/ವರ್ಗದವರ ಆದಾಯ ಮಿತಿ ರೂ.೨.೫ ಲಕ್ಷ ದಿಂದ ರೂ.೧೦ಲಕ್ಷಕ್ಕೆ ಹೆಚ್ಚಿಸಬೇಕು. ಬೆಲೆ ಏರಿಕೆಗೆ ತಕ್ಕಂತೆ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ರೂ.೧೬೦೦ ರಿಂದ ರೂ.೨೫೦೦ಗಳಿಗೆ ಹೆಚ್ಚಿಸಬೇಕು. ಎಸ್ಸಿಪಿ/ಟಿಎಸ್ಪಿ ಅನುದಾನದಲ್ಲಿ ಈಹಿಂದೆ ಇದ್ದಂತಹ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಜಿಎನ್ಎಂ ನರ್ಸಿಂಗ್ ತರಬೇತಿ ಪುನರಾರಂಭಿಸಬೇಕು ಎಂದರು.ಈಗಾಗಲೇ ಚಿತ್ರದುರ್ಗದಲ್ಲಿ ನಡೆದ ಅಂಬೇಡ್ಕರ್ ಉತ್ಸವದಲ್ಲಿ ಮನವಿ ಸಲ್ಲಿಸಿದ್ದು, ತಾವುಗಳು ಈಡೇರಿಸುವ ಭರವಸೆ ನೀಡಲಾಗಿತ್ತು. ಆದ್ದರಿಂದ ಶೀಘ್ರವೇ ಈ ಬೇಡಿಕೆಗಳು ಈಡೇರಿಸುವಂತೆ ಮನವಿ ಮಾಡಿದರು.ಮುಖಂಡರಾದ ಹುಚ್ಚವ್ವನಹಳ್ಳಿ ವೆಂಕಟೇಶ್, ತುರುವನೂರು ವೆಂಕಟೇಶ್, ಮಾಜಿ ನಗರಸಭೆ ಅಧ್ಯಕ್ಷ ಟಿ.ಚಂದ್ರಶೇಖರ್, ಭೋವಿ ಸಮಾಜದ ಮುಖಂಡ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಈ.ನಾಗೇಂದ್ರಪ್ಪ ಇತರರಿದ್ದರು.