i
ಬಾರ್, ರೆಸ್ಟೋರೆಂಟ್, ಗ್ಯಾರೇಜ್, ಕಟ್ಟಡ ನಿರ್ಮಾಣ ಸ್ಥಳದ ಮೇಲೆ ದಾಳಿ- ತಹಶೀಲ್ದಾರ್ ರಾಜೇಶ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಬಾಲ ಕಾರ್ಮಿಕರ ಹೋಬಳಿವಾರು ಟಾಸ್ಕ್ ಪೋರ್ಸ್ ಕಮಿಟಿ ರಚಿಸಲಾಗಿದ್ದು, ಈ ಸಮಿತಿ ಅಧಿಕಾರಿಗಳು ತಿಂಗಳಿಗೊಂದು ದಿನ ಬಾಲ ಕಾರ್ಮಿಕರ ಅನಿರೀಕ್ಷಿತ ದಾಳಿ ಕೈಗೊಳ್ಳಬೇಕು ಎಂದು ಹಿರಿಯೂರು ತಹಶೀಲ್ದಾರ್ ರಾಜೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿರಿಯೂರು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಬಾಲ ಕಾರ್ಮಿಕ ಟಾಸ್ಕ್ ಪೋರ್ಸ್ ಹಾಗೂ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಂಡದ ವ್ಯಾಪ್ತಿಯಲ್ಲಿ ಬರುವ, ಬಾರ್, ರೆಸ್ಟೋರೆಂಟ್, ಗ್ಯಾರೇಜ್, ಕಟ್ಟಡ ನಿರ್ಮಾಣ, ಪೌಲ್ಟ್ರಿಫಾರಂನಲ್ಲಿ ಅನಿರೀಕ್ಷಿತ ದಾಳಿಯನ್ನು ನಡೆಸಿ, ಬಾಲ ಕಾರ್ಮಿಕ ಮಕ್ಕಳು ಕಂಡುಬಂದರೆ ತಕ್ಷಣ ತಪ್ಪಿತಸ್ಥ ಮಾಲೀಕರಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳಾದ ನಗರಸಭೆ ಪೌರಾಯುಕ್ತ ಮಹಂತೇಶ್, ಕಾರ್ಮಿಕ ನಿರೀಕ್ಷಕ ಅಲ್ಲಾಭಕ್ಷ್, ಬಾಲ ಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್, ಶಿಕ್ಷಣ ಇಲಾಖೆ ಅಧಿಕಾರಿ ಕೆ.ಎಂ.ಮನೋಹರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧೀರ್ ಸೇರಿದಂತೆ ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.