i
ಬರ ಪರಿಹಾರ 2 ಸಾವಿರ ರೂ. ರೈತರ ಖಾತೆಗೆ ಶೀಘ್ರ-ಸಿಎಂ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭೀಕರ ಬರದಿಂದ ತತ್ತರಿಸಿರುವ ನಾಡಿನ ರೈತರ ನೆರವಿಗೆ ಧಾವಿಸುವ ಉದ್ದೇಶದಿಂದ ಮೊದಲ ಕಂತಿನ ಬರಪರಿಹಾರವಾಗಿ 2,000 ರೂ.ಗಳನ್ನು ನಮ್ಮ ಸರ್ಕಾರದ ವತಿಯಿಂದ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್ ಅನುದಾನಕ್ಕೆ ಕಾಯದೆ, ರೈತರ ಹಿತಕಾಪಾಡುವ ಏಕೈಕ ಉದ್ದೇಶದಿಂದ ತಕ್ಷಣದ ನೆರವನ್ನು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ತಿಳಿಸಿದ್ದಾರೆ. ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ. ಮುಂಬರುವ ದಿನಗಳಲ್ಲಿ ಮಳೆ ಕೊರತೆಯಾದರೂ ನಾಡಿನ ರೈತರ ಬೆಳೆಗಳಿಗೆ ನೀರಿನ ಅಭಾವ ಎದುರಾಗಬಾರದು ಎಂಬ ಸದಾಶಯದೊಂದಿಗೆ ರೂ. 100 ಕೋಟಿ ವೆಚ್ಚದಲ್ಲಿ ರಾಜ್ಯದ 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆಯನ್ನು ಮರುಜಾರಿ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ. ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ ನಾಡಿನ ರೈತರ 4 ಲಕ್ಷ ಕೃಷಿ ಪಂಪ್ಸೆಟ್ಗಳನ್ನು ಸಕ್ರಮಗೊಳಿಸುವ ಮೂಲಕ, ಮೂಲಸೌಕರ್ಯಗಳನ್ನು ಒದಗಿಸಲಾಗುವುದು. ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.