i
ಕಾಂಗ್ರೆಸ್ ಸರ್ಕಾರ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗದಗ ಜಿಲ್ಲಾ ಪ್ರವಾಸದ ಹಿನ್ನಲೆಯಲ್ಲಿ ಗದಗ ಜಿಲ್ಲೆಯ ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ ನೀಡಿ ಪತ್ರಿಕಾಗೋಷ್ಠಿ ನಡೆಸಿದರು.
ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ರೈತ ವಿರೋಧಿ, ಜನ ವಿರೋಧಿ ನಿಲುವುಗಳನ್ನು ವಿವರಿಸಲಾಯಿತು ಎಂದು ಅವರು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಗದ್ದಿಗೌಡರ್, ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಸಿ.ಸಿ.ಪಾಟೀಲ್, ಜಿಲ್ಲಾಧ್ಯಕ್ಷರಾದ ಶ್ರೀ ಮುತ್ತಣ್ಣ ಲಿಂಗನಗೌಡ ಅವರು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಡ್ಡಪಲ್ಲಕ್ಕಿ ಉತ್ಸವ-
ದಾವಣಗೆರೆಯಿಂದ ಹುಬ್ಬಳ್ಳಿಗೆ ತೆರಳುವ ಮಾರ್ಗಮಧ್ಯೆ ಶ್ರೀಶೈಲ ಪೀಠದ ಜಗದ್ಗುರುಗಳಾದ ಡಾ. ಚನ್ನಸಿದ್ದರಾಮ ಪಂಡೀತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಹಾಗೂ ಶ್ರೀ ಕಾಶಿ ಪೀಠದ ಜಗದ್ಗುರುಗಳಾದ ಪೂಜ್ಯ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಭಾಗವಹಿಸಿ ವಿಜಯೇಂದ್ರ ಅವರು ಆಶೀರ್ವಾದ ಪಡೆದರು. ಶ್ರೀಗಳ ಆಶೀರ್ವಾದ ಸಿಕ್ಕಿದ್ದು ಸೌಭಾಗ್ಯ ನನ್ನದಾಯಿತು. ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಅಡ್ಡಪಲ್ಲಕ್ಕಿ ಉತ್ಸವವು ಸಕಲ ಸದ್ಭಕ್ತರಿಗೂ ಶುಭವುಂಟುಮಾಡಲೆಂದು ಹಾರೈಸುತ್ತಿರುವುದಾಗಿ ವಿಜಯೇಂದ್ರ ತಿಳಿಸಿದ್ದಾರೆ.