i
ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕರ್ನಾಟಕ ರಾಜ್ಯ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿ ಗೊಳಿಸಿದೆ. ಆಸಕ್ತ ರೈತರು ಡಿಸೆಂಬರ್ ೩೧ ರೊಳಗೆ ಸಂಬಂದಿಸಿದ ರೈತಸಂಪರ್ಕ ಕೇಂದ್ರಗಳಿಗೆ ಅರ್ಜಿ ಸಲ್ಲಿಸುವ ಮೂಲಕ ಇದರ ಸೌಲಭ್ಯ ಪಡೆಯಬಹುದು. ಎಂದು ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃಷಿ ಭಾಗ್ಯ ಯೊಜನೆಯನ್ನು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಟಾನ ಮಾಡಲಾಗುವುದು. ಈ ಯೋಜನೆಯಡಿ ಕ್ಷೇತ್ರ ಬದು, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಹೊಂಡದ ಸುತ್ತಾ ತಂತಿ ಬೇಲಿ ನಿರ್ಮಾಣ, ಡೀಸೆಲ್ ಪಂಪ್ ಸೆಟ್ ಹಾಗೂ ಸೂಕ್ಷ್ಮನೀರಾವರಿ ಘಟಕಗಳಿಗೆ ಸರ್ಕಾರದಿಂದ ನಿಯಮಾನುಸಾರ ಸಹಾಯಧನ ನೀಡಲಾಗುವುದು. ಫಲಾನುಭವಿಗಳು ಈ ಎಲ್ಲಾ ೬ ಘಟಕಗಳನ್ನು ಮಾರ್ಗಸೂಚಿಯನ್ವಯ ಕಡ್ಡಾಯವಾಗಿ ಅಳವಡಿಸಿ ಕೊಳ್ಳಬೇಕಾಗುತ್ತದೆ. ಈ ಹಿಂದೆ ಕೃಷಿ ಹೊಂಡ ಮಾಡಿಕೊಳ್ಳದ ರೈತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು.