i
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತ ಚುನಾವಣಾ ಆಯೊಗವು ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮ ಸಂಬಂಧ ಈಗಾಗಲೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ವಿಲೇವಾರಿ ಮಾಡುವ ಅವಧಿಯನ್ನು ಜ. 12 ರವರೆಗೂ ವಿಸ್ತರಿಸಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ ಮುಂತಾದವುಗಳಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ಡಿ. 09 ರವರೆಗೂ ಅರ್ಜಿಗಳು ಸಲ್ಲಿಕೆಯಾಗಿರುತ್ತವೆ. ಈ ರೀತಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ತೀರ್ಮಾನ ಕೈಗೊಂಡು ವಿಲೇವಾರಿ ಮಾಡಲು ಈ ಮೊದಲು ಡಿ. 26 ಕೊನೆಯ ದಿನವಾಗಿತ್ತು, ಅಲ್ಲದೆ ಮತದಾರರ ಪಟ್ಟಿಯ ಅಂತಿಮ ಪ್ರಕಟಣೆಯ ದಿನಾಂಕವನ್ನು ಜ. 05 ಕ್ಕೆ ನಿಗದಿಪಡಿಸಲಾಗಿತ್ತು. ಇದೀಗ ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳಿಗೆ ಸಂಬಂಧಿಸಿದ ಅರ್ಜಿಗಳ ಬಗ್ಗೆ ತೀರ್ಮಾನ ಕೈಗೊಳ್ಳಲು ಅವಧಿಯನ್ನು ಜ. 12 ರವರೆಗೆ ವಿಸ್ತರಿಸಿದೆ, ಅಲ್ಲದೆ ಮತದಾರರ ಅಂತಿಮ ಪಟ್ಟಿಯ ಪ್ರಕಟಣೆ ದಿನಾಂಕವನ್ನು ಜ. 22 ಕ್ಕೆ ಮರುನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.