i
ಡಿ.28 ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನಾ ಶಾಸ್ತç ಇಲಾಖೆ ಹಾಗೂ SLEIGHTS(R), ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಡಿ.28 ರಂದು ಬೆಳಿಗ್ಗೆ 10.30 ಕ್ಕೆ ನಗರದ ತರಾಸು ರಂಗಮAದಿರದಲ್ಲಿ ರಾಷ್ಟಿçÃಯ ಗ್ರಾಹಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಹೆಚ್.ಎನ್. ಮೀನಾ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸದಸ್ಯೆ ಬಿ.ಕೆ. ಯಶೋಧ ಭಾಗವಹಿಸುವರು.ಇ-ಕಾಮರ್ಸ್ ಮತ್ತು ಡಿಜಿಟಲ್ ವ್ಯಾಪಾರದ ಯುಗದಲ್ಲಿ ಗ್ರಾಹಕರ ರಕ್ಷಣೆ ಕುರಿತು ವಕೀಲರಾದ ಬಿ.ಕೆ.ರಹಮತ್ವುಲ್ಲಾ ಉಪನ್ಯಾಸ ನೀಡುವರು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಕೆ.ಪಿ.ಮಧುಸೂಧನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.