i
ಬೈಕ್-ಆಟೋ ನಡುವೆ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು, ಮತ್ತಿಬ್ಬರು ಗಂಭೀರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಯಲ್ ಎನ್ಫೀಲ್ಡ್ ಬೈಕ್ ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದರೆ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಹೊಸ ಕಳ್ಳಹಳ್ಳಿ ಬಳಿ ಆಟೋ ಮತ್ತು ಬೈಕ್ ಮಧ್ಯ ಡಿಕ್ಕಿ ಸಂಭವಿಸಿ ಬೈಕಲ್ಲಿದ್ದ ಬೆಂಗಳೂರು ಮೂಲದ ಶಿಲ್ಪ(30), ಆಟೋದಲ್ಲಿದ್ದ ಚಿತ್ರದುರ್ಗ ಮೂಲದ ಬರ್ಕತ್(35) ಸ್ಥಳದಲ್ಲೇ ಸಾವು ಕಂಡಿದ್ದಾರೆ.ಚಳ್ಳಕೆರೆಯಿಂದ ಬೈಕಲ್ಲಿ ಚಿತ್ರದುರ್ಗಕ್ಕೆ ಬರುತ್ತಿದ್ದ ಶಿಲ್ಪ ಪತಿ ರಾಘವೇಂದ್ರ ಮತ್ತು ಆಟೋದಲ್ಲಿ ಚಳ್ಳಕೆರೆ ಕಡೆ ಹೊರಟಿದ್ದ ಸಲೀಂ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.ಸ್ಥಳಕ್ಕೆ ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್ ಭೇಟಿ ಪರಿಶೀಲನೆ ಮಾಡಿದ್ದಾರೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.