i
ಡಿಸಿಸಿ ಬ್ಯಾಂಕಿನ ಲಾಭದಲ್ಲಿ ಶೇ 2ರಷ್ಟು ಶಿಕ್ಷಣ ನಿಧಿ ಸ್ಥಾಪನೆ–ಅಧ್ಯಕ್ಷ ಸುಧಾಕರ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಾಲಾ–ಕಾಲೇಜ್ ಗಳ ಮಕ್ಕಳ ಶೈಕ್ಷಣಿಕ ಉನ್ನತಿಗಾಗಿ ಬ್ಯಾಂಕಿನ ಲಾಭಾಂಶದಲ್ಲಿ ಶೇ.2ರಷ್ಟು ನಿಧಿಯನ್ನು ಶಿಕ್ಷಣ ನಿಧಿಯನ್ನಾಗಿ ಬಳಕೆ ಮಾಡಲಾಗುತ್ತದೆ ಎಂದು ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಡಿ.ಸುಧಾಕರ್ ಹೇಳಿದರು.
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಆಯೋಜಿಸಲಾಗಿದ್ದ ಆಡಳಿತ ಮಂಡಳಿ ಸಭೆಯಲ್ಲಿ ಅವರು ಆಡಳಿತ ಮಂಡಳಿಯ ಒಪ್ಪಿಗೆ ಪಡೆದು ಘೋಷಣೆ ಮಾಡಿದರು.
ಡಿಸಿಸಿ ಬ್ಯಾಂಕಿನ ೨೦೨೨-೨೩ನೇ ಸಾಲಿನ ಲಾಭದಲ್ಲಿ ಶೇ-೨ರಷ್ಟು ಸಹಕಾರ ಶಿಕ್ಷಣ ನಿಧಿಯನ್ನು ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಡಿ.ಸುಧಾಕರ್, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಪ್ ಇವರು ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಾಟೀಲ್ ರವರಿಗೆ ಶಿಕ್ಷಣ ನಿಧಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ಹೆಚ್.ಬಿ.ಮಂಜುನಾಥ್, ಡಿಸಿಸಿ ಬ್ಯಾಂಕಿನ ನಿರ್ದೇಶಕರುಗಳಾದ ಎಸ್.ಆರ್.ಗಿರೀಶ್, ಟಿ.ಮಹಾಂತೇಶ್, ಹೆಚ್.ಎಂ.ದ್ಯಾಮಣ್ಣ, ಸಿ.ವೀರಭದ್ರಬಾಬು, ಜಗ್ಗಣ್ಣ, ವಿನೋದಸ್ವಾಮಿ ಮತ್ತು ಯೂನಿಯನ್ ಸಿಬ್ಬಂದಿ ಟಿ.ಎನ್.ಶ್ರೀನಿವಾಸ್ ಹಾರಿದ್ದರು.