![](https://www.chandravallinews.com/wp-content/uploads/2023/12/WhatsApp-Image-2023-12-31-at-5.40.37-PM-1024x471.jpeg)
i
ಸಹಕಾರ ತತ್ವದ ಬಗ್ಗೆ ಜನಜಾಗೃತಿ ಮತ್ತು ಬದ್ಧತೆ ರೂಢಿಸುವುದು ನಮ್ಮ ಮುಖ್ಯ ಉದ್ದೇಶ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸುಮಾರು ೧೦೦ ವರ್ಷಗಳ ಇತಿಹಾಸವುಳ್ಳ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ರಾಜ್ಯದ ಸಹಕಾರ ಚಳುವಳಿಯ ಆರೋಗ್ಯಕರ ಬೆಳವಣಿಗೆ ಮಹತ್ವದ ಕೊಡುಗೆ ನೀಡಿದೆ ಎಂದು ಸಹಕಾರ ರತ್ನ ಪುರಸ್ಕೃತ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಆರ್. ರಾಮರೆಡ್ಡಿ ತಿಳಿಸಿದರು.
ಇಲ್ಲಿನ ದುರ್ಗದ ಸಿರಿ ಹೋಟೆಲ್ ಸಭಾಂಗಣದಲ್ಲಿ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಹಾಗೂ ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ಚಿತ್ರದುರ್ಗ ಇವರುಗಳ ಸಹಯೋಗದೊಂದಿಗೆ ಬೆಂಗಳೂರು ವಿಭಾಗದ ಪತ್ತಿನ ಸಹಕಾರ ಸಂಘಗಳ ಸರ್ವತೋಮುಖ ಅಭಿವೃದ್ಧಿಗಾಗಿ ಅಧ್ಯಕ್ಷರು, ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ಹಿರಿಯ ಅಧಿಕಾರಿಗಳಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ತತ್ವದ ಬಗ್ಗೆ ಜನಜಾಗೃತಿಯನ್ನು ಮೂಡಿಸುವುದು, ಸಹಕಾರ ತತ್ವದ ಬಗ್ಗೆ ಜನರಲ್ಲಿ ಬದ್ಧತೆಯನ್ನು ರೂಢಿಸುವುದು ನಮ್ಮ ಮುಖ್ಯ ಉದ್ಧೇಶವಾಗಿದೆ ಎಂದರು. ಸಹಕಾರ ರತ್ನ ಪುರಸ್ಕೃತ, ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಿಂಕಲ್ ಬಸವರಾಜ್ ಮಾತನಾಡಿ ಸಹಕಾರ ಸಂಘ ಸಂಸ್ಥೆಗಳ ಯಶಸ್ವಿ ಕಾರ್ಯಾಚರಣೆಗೆ ರಾಜ್ಯ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಅಗತ್ಯವಾದ ಸಹಕಾರ ಶಿಕ್ಷಣ, ತರಬೇತಿ, ಮತ್ತು ಸಂಘ ಸಂಸ್ಥೆಗಳಸಾಧನೆಗೆ ವ್ಯಾಪಕ ಪ್ರಚಾರ ನೀಡುವುದು ನಮ್ಮ ಮಹಾಮಂಡಳ ಸಂಸ್ಥೆಯ ಉದ್ದೇಶಗಳಾಗಿದೆ ಎಂದರಲ್ಲದೆ ರಾಜ್ಯದ ಸಹಕಾರ ಚಳುವಳಿಯ ಬೆಳವಣಿಗೆಗೆ ಸಹಕಾರ ಮಾಮಂಡಳ ದೊಡ್ಡ ಪ್ರಮಾಣದ ಕೊಡುಗೆ ನೀಡಿದೆ. ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸೇವೆ ಸಲ್ಲಿಸಿದೆ ಹಿರಿಯ ಸಹಕಾರಿಗಳನ್ನು ಗುರುತಿಸಿ ಪ್ರತಿ ವರ್ಷ ಸಹಕಾರ ರತ್ನ ಪ್ರಶಸ್ತಿ ನೀಡಲಾಗುತ್ತಿದೆ, ಈ ಎಲ್ಲಾ ಕಾರ್ಯಚಟುವಟಿಕೆಗಲಿಗೆ ಸರ್ಕಾರದ ನೆರವು ಹಾಗೂ ನಮ್ಮ ಸಹಕಾರ ಸಂಘಗಳ ಪ್ರೋತ್ಸಾಹ ಅಗತ್ಯವಾಗಿದೆ ಎಂಬುದಾಗಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಅಧ್ಯಕ್ಷ ವಿ.ರಾಜು ಮಾತನಾಡಿ, ದೇಶದ ಗ್ರಾಮೀಣ ಪ್ರದೇಶದ ಜನರ, ಕೃಷಿಕರ, ಬಡಜನರ, ಆರ್ಥಿಕ ದುರ್ಬಲರನ್ನು ಸ್ವಾವಲಂಬಿಗಳನ್ನಾಗಿ ಮಾಡಿ, ಅವರ ಬದುಕನ್ನು ಹಸನಾಗಿಸುವಲ್ಲಿ ಹಾಗೂ ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವಲ್ಲಿ ಸಹಕಾರ ಸಂಘಗಳು ಅತ್ಯಂತ ಮಹತ್ವರ ಪಾತ್ರ ವಹಿಸುತ್ತಿವೆ ಎಂಬುದಾಗಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಸಲಹೆಗಾರ ಪಿ.ರುದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ನಿರ್ದೇಶಕ ಡಿ.ಆರ್. ನಾಗೇಶಪ್ಪ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಹಾಗೂ ಸಹಕಾರ ರತ್ನ ಪುರಸ್ಕೃತ ಎ.ಸಿ.ನಾಗರಾಜ್, ಚಿತ್ರದುರ್ಗ ಜಿಲ್ಲಾ ಸಹಕಾರಿ ಯೂನಿಯನ್ನಿನ ಅಧ್ಯಕ್ಷ ಜೆ. ಶಿವಪ್ರಕಾಶ್, ಸಹಕಾರ ಸಂಘಗಳ ಉಪನಿಬಂಧಕ ಟಿ.ಮಧುಶ್ರೀನಿವಾಸ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕ ಕೆ.ಮಹೇಶ್ವರಪ್ಪ, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾದಿಕಾರಿ ಪ್ರಜ್ವಲ್ ಕೆ.ಎನ್. ಉಪಸ್ಥಿತರಿದ್ದರು.