i
ರೈತರು ಮತ್ತು ಜನರ ಹಿತ ಮರೆತ ಕಾಂಗ್ರೆಸ್ ಸರ್ಕಾರ-ವಿಜಯೇಂದ್ರ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಅವರ ತಂಡವು ದಾವಣಗೆರೆ ಜಿಲ್ಲೆಯ ಜಮಾಪುರ ಮುಖ್ಯರಸ್ತೆಯ ಆನಗೋಡಿನಲ್ಲಿ ತೀವ್ರ ಬರದಿಂದ ಸಂಪೂರ್ಣ ಬೆಳೆ ಹಾನಿಗೊಳಗಾಗಿರುವ ರೈತರ ಜಮೀನುಗಳಿಗೆ ಭೇಟಿ ನೀಡಿ ಸ್ಥಳ ಪರಿವೀಕ್ಷಣೆ ನಡೆಸಿ, ಸಂಕಷ್ಟದಲ್ಲಿರುವ ರೈತರಿಗೆ ಸಾಂತ್ವನ ಹೇಳಲಾಯಿತು. ಎಲ್ಲೆಡೆ ಮಳೆಯಿಲ್ಲದೆ ಪಸಲು ನೆಲಕಚ್ಚಿದ್ದು, ರೈತ ಸಮುದಾಯ ಕಂಗಾಲಾಗಿರುವ ಸಂದರ್ಭದಲ್ಲಿ ಎಲ್ಲದಕ್ಕೂ ಕೇಂದ್ರದೆಡೆ ಬೆಟ್ಟು ತೋರಿಸಿ ಜನಹಿತ ಮರೆತಿರುವ ರಾಜ್ಯ ಸರ್ಕಾರವನ್ನು ಎಚ್ಚರಿಸಿ, ಸೂಕ್ತ ಪರಿಹಾರ ಕೊಡಿಸಲಾಗುತ್ತದೆ ಎಂದು ವಿಜಯೇಂದ್ರ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ್, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಶಾಸಕ ಬಿ.ಪಿ.ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್, ಮುಖಂಡರಾದ ಲೋಕಿಕೆರೆ ನಾಗರಾಜ್, ಜಿ.ಎಸ್.ಅನಿತ್ ಕುಮಾರ್, ಎಸ್.ಎ.ರವೀಂದ್ರನಾಥ್, ಲಿಂಗಣ್ಣ, ಬಸವರಾಜ ನಾಯ್ಕ್ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.