i
ಜನವರಿ 7 ರಂದು 5ನೇ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಯಂತೋತ್ಸವ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದಲ್ಲಿ ಸುಮಾರು ವಿವಿಧ ಮಠಗಳ ಮಠಾಧೀಶರನ್ನು ಒಳಗೊಂಡಂತೆ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿದ್ಯದಲ್ಲಿ ದೊಡ್ಡಬಳ್ಳಾಪುರ ನಗರದ ಶ್ರೀ ಕ್ಷೇತ್ರ ದೊಡ್ಡ ಮಠದಲ್ಲಿ 5ನೇ ವರ್ಷದ ಶ್ರೀ ಸಿದ್ಧಲಿಂಗೇಶ್ವರ ಜಯಂತೋತ್ಸವವನ್ನ ಇದೇ ಜ.7 ನೇ ತಾರೀಖು ಭಾನುವಾರ ಅಯೋಜನೆ ಮಾಡಲಾಗಿದೆ ಎಂದು ದೊಡ್ಡ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ತಿಳಿಸಿದರು.
ನಗರದ ದೊಡ್ಡಮಠದ ಆವರಣದಲ್ಲಿ ಆಯೋಜನೆ ಮಾಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಪ್ರಮುಖ ರಸ್ತೆಗಳಲ್ಲಿ ಬೆಳ್ಳಿ ರಥದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಮಹಾಸ್ವಾಮಿಗಳ ಪ್ರತಿಮೆಯನ್ನು ಮೆರವಣಿಗೆಯ ಮುಖಾಂತರ ಭಗತ್ ಸಿಂಗ್ ಕ್ರೀಡಾಂಗಣ ಸಮೀಪದಲ್ಲಿರುವ ಶ್ರೀ ಕ್ಷೇತ್ರ ದೊಡ್ಡ ಮಠಕ್ಕೆ ಆಗಮಿಸಲಿದೆ, ನಂತರ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಸಿದ್ದಗಂಗಾ ಮಠ ತುಮಕೂರು ಇವರ ದಿವ್ಯ ಸಾನಿಧ್ಯದಲ್ಲಿ ಜ್ಞಾನ ದಾಸೋಹ, ಪುಸ್ತಕ ಬಿಡುಗಡೆ, ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾಲಿಂಗಯ್ಯ, ಮುತ್ತಣ್ಣ, ಮಂಜುನಾಥ್ ಉಪಸ್ಥಿತರಿದ್ದರು.