i
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ನಲ್ಲಿ ಅರ್ಥಶಾಸ್ತ್ರದ ವಿವಿಧ ಭಾಗದ ವತಿಯಿಂದ ವಿಶೇಷ ಉಪನ್ಯಾಸಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಪ್ರಸ್ತುತ ಸುಸ್ಥಿರ ಅಭಿವೃದ್ಧಿ ಮತ್ತು ಆರ್ಥಿಕ ಸುಧಾರಣೆಗಳ ಎಂಬ ವಿಷಯದ ಬಗ್ಗೆ ಸಂಪನ್ಮೂಲ ಸಹಾಯಕ ಪ್ರಾಧ್ಯಾಪಕಿ ವ್ಯಕ್ತಿ ವಿ. ಆಶಾಲತಾ ಇವರು ವಿದ್ಯಾರ್ಥಿನಿಯರಿಗೆ ಸುಸ್ಥಿರ ಅಭಿವೃದ್ಧಿ ಮೂಲ ನೆಲೆ ಹಾಗೂ ಸುಧಾರಣಾ ಕ್ರಮಗಳನ್ನು ಕುರಿತು ವಿಚಾರ ಮಂಡನೆ ಮಾಡಿದ್ದರು.
ನಂತರ ಮಾತನಾಡಿದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಸುದರ್ಶನ್ ಕುಮಾರ್ ಬದಲಾಗುತ್ತಿರುವ ಸಂಕೀರ್ಣ ಆರ್ಥಿಕ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರ ಪಾತ್ರ ಸುಸ್ಥಿರ ಅಭಿವೃದ್ಧಿಗೆ ಬಹಳ ಮಹತ್ವವಾದದ್ದು ನಿರಂತರತೆ ಕಾಪಾಡಿಕೊಳ್ಳುವುದು ಮುಖ್ಯ ಎಂದು ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಹನುಮಂತರಾಯಪ್ಪ ಹೆಚ್ ಹಾಗೂ ಐಕ್ಯೂಎಸಿ ಸಂಚಾಲಕಿ ಎಂ.ದಿವ್ಯಶ್ರೀ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.