i
ಹೊಸಯಳನಾಡು ಗ್ರಾಪಂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಇಂದಿರಾ ಆವಾಸ್ ಯೋಜನೆಯಲ್ಲಿ ಮಂಜೂರಾಗಿದ್ದ ಮನೆಯ ಬಿಲ್ ಬಿಡುಗಡೆ ಮಾಡಿ ಕೊಡಲು ಲಂಚಕ್ಕೆ ಬೇಡಿಕೆಯಿಟ್ಟು ಮನೆಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಹೊಸಯಳನಾಡು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆನಂದ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯಿತಿಯಲ್ಲಿ ಆನಂದ್ ಬಿಲ್ ಕಲೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪಕ್ಕದ ಆಲೂರು ಗ್ರಾಮದ ಪಾಂಡುರಂಗಪ್ಪ ಎಂಬುವವರ ಮನೆಯ ಬಿಲ್ ಮಂಜೂರು ಮಾಡಿ ಕೊಡಲು 30 ಸಾವಿರ ಲಂಚ ಕೇಳಿದ್ದರು. ಇದರಲ್ಲಿ 25 ಸಾವಿರ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಾಂಡುರಂಗಪ್ಪ ಅವರು ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಲೋಕಾಯುಕ್ತ ಎಸ್ಪಿ ವಾಸುದೇವರಾವ್, ಡಿವೈಎಸ್ಪಿ ಮೃತ್ಯಂಜಯ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಆರೋಪಿ ಕುರಿತು ತನಿಖೆ ಮುಂದುವರೆದಿದೆ.