i
ರಾಷ್ಟ್ರಮಂದಿರದ ಭವ್ಯ ಸ್ವಾಗತಕ್ಕಾಗಿ ಸ್ವಚ್ಛತೀರ್ಥ ಅಭಿಯಾನ ಕೈಗೊಂಡ ವಿಜಯೇಂದ್ರ…
ಚಂದ್ರವಳ್ಳಿ ನ್ಯೂಸ್, ಶಿಕಾರಿಪುರ:
“ರಾಷ್ಟ್ರಮಂದಿರದ ಭವ್ಯ ಸ್ವಾಗತಕ್ಕಾಗಿ ಸ್ವಚ್ಛತೀರ್ಥ ಅಭಿಯಾನ”ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಇರುವ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆ ಮೇರೆಗೆ ಶಿಕಾರಿಪುರದ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನದ ಆವರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು, ಭಕ್ತರು ಸ್ವಚ್ಛಗೊಳಿಸಿದರು. ಜನವರಿ 21 ರ ವರೆಗೆ ಎಲ್ಲೆಡೆ ದೇವಾಯಗಳನ್ನು ಸ್ವಚ್ಛಗೊಳಿಸಿ 22 ರಂದು ಪ್ರತಿ ಮನೆಗಳಲ್ಲಿ ರಾಮಜ್ಯೋತಿ ಬೆಳಗುವ ಮೂಲಕ ಶ್ರೀರಾಮನನ್ನು ಸ್ವಾಗತಿಸುವಂತೆ ವಿಜಯೇಂದ್ರ ಕರೆ ನೀಡಿದರು.
ರಾಜ್ಯದೆಲ್ಲೆಡೆ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ಯಶಸ್ವಿಯಾಗಿ ನೆರವೇರಲಿ. ಜನವರಿ 22 ರಂದು ಶ್ರೀರಾಮ ಜ್ಯೋತಿ ಬೆಳಗಲು ಸಿದ್ಧತೆಗಳು ಭಕ್ತಿಪೂರ್ವಕವಾಗಿ ಸಾಗಲಿ ಎಂದು ವಿಜಯೇಂದ್ರ ಆಶಿಸಿದ್ದಾರೆ.ಈ ಸಂದರ್ಭದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರುಮೂರ್ತಿ, ಪಕ್ಷದ ಹಾಗೂ ಯುವ ಮೋರ್ಚಾ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.