i
ಚಿತ್ರದುರ್ಗ, ತುಮಕೂರು, ದಾವಣಗೆರೆ ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಬಿಜೆಪಿ ವರಿಷ್ಠರು ಅಳೆದು ತೂಗಿ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಅತ್ಯಂತ ಕುತೂಹಲ ಕೆರಳಿಸಿದ್ದ ಬಿ.ಸಿ.ಹನುಮಂತೇಗೌಡರನ್ನು ಮಧುಗಿರಿ ಜಿಲ್ಲಾ ಬಿಜೆಪಿ ಘಟಕಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಗೆ ಎ.ಮುರುಳಿ ಮುಂದುವರೆದಿದ್ದಾರೆ. ತುಮಕೂರು ಜಿಲ್ಲೆಗೆ ಹೆಚ್.ಎಸ್.ರವಿಶಂಕರ್, ದಾವಣಗೆರೆ ಜಿಲ್ಲೆಗೆ ರಾಜಶೇಖರ್ ಇವರುಗಳ ಜೊತೆಯಲ್ಲಿ ರಾಜ್ಯದ 39 ಜಿಲ್ಲಾ ಸಂಘಟನಾತ್ಮಕ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ವಿಜಯೇಂದ್ರ ಪಟ್ಟಿ ಬಿಡುಗಡೆ ಮಾಡಿದ್ದಾರೆ.ಒಟ್ಟು 39 ಸಂಘಟನಾ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರುಗಳ ಪೈಕಿ ಇಬ್ಬರು ಹಾಲಿ ಶಾಸಕರು ಹಾಗೂ ಮೂವರು ಮಾಜಿ ಶಾಸಕರಿಗೆ ಜಿಲ್ಲಾಧ್ಯಕ್ಷ ಪಟ್ಟ ದಕ್ಕಿದೆ. ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕ, ಬಿಜೆಪಿ ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಹಾಗೂ ಸಹಕಾರ್ಯದರ್ಶಿಗಳನ್ನೂ ಇದೇ ಸಂದರ್ಭದಲ್ಲಿ ವಿಜಯೇಂದ್ರ ನೇಮಿಸಿದ್ದಾರೆ.
ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಹಾಗೂ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಅವರಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಅದೇ ರೀತಿ, ಮೂವರು ಮಾಜಿ ಶಾಸಕರಾದ ಎಲ್. ನಾಗೇಂದ್ರ, ಸಿಎಸ್. ನಿರಂಜನ್ ಕುಮಾರ್ ಮತ್ತು ಅರುಣ್ ಕುಮಾರ್ ಪೂಜಾರ ಅವರಿಗೂ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕರಾಗಿ ಎಸ್. ದತ್ತಾತ್ರಿ ಅವರನ್ನು ನೇಮಕ ಮಾಡಲಾಗಿದ್ದು, ಬಿಜೆಪಿ ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೋಕೇಶ್ ಅಂಬೆಕಲ್ಲು, ಸಹ ಕಾರ್ಯದರ್ಶಿಯಾಗಿ ಬಿ.ಹೆಚ್. ವಿಶ್ವನಾಥ ನೇಮಕಗೊಂಡಿದ್ದಾರೆ.ಬಿಜೆಪಿ ಜಿಲ್ಲಾಧ್ಯಕ್ಷರ ಪಟ್ಟಿಮೈಸೂರು ನಗರ- ಎಲ್. ನಾಗೇಂದ್ರಮೈಸೂರು ಗ್ರಾಮಾಂತರ- ಎಲ್.ಆರ್. ಮಹದೇವಸ್ವಾಮಿಚಾಮರಾಜನಗರ- ಸಿ.ಎಸ್. ನಿರಂಜನ್ ಕುಮಾರ್ಮಂಡ್ಯ- ಇಂದ್ರೇಶ್ ಕುಮಾರ್ಹಾಸನ- ಸಿದ್ದೇಶ್ ನಾಗೇಂದ್ರಕೊಡಗು- ರವಿ ಕಾಳಪ್ಪ
ದಕ್ಷಿಣ ಕನ್ನಡ- ಸತೀಶ್ ಕುಂಪಲಉಡುಪಿ- ಕಿಶೋರ್ ಕುಂದಾಪುರಚಿಕ್ಕಮಗಳೂರು- ದೇವರಾಜ ಶೆಟ್ಟಿಶಿವಮೊಗ್ಗ- ಟಿ.ಡಿ. ಮೇಘರಾಜ್ಉತ್ತರ ಕನ್ನಡ- ಎನ್.ಎಸ್. ಹೆಗಡೆಹಾವೇರಿ- ಅರುಣ್ ಕುಮಾರ್ ಪೂಜಾರಹುಬ್ಬಳ್ಳಿ- ಧಾರವಾಡ- ತಿಪ್ಪಣ್ಣ ಮಜ್ಜಗಿಧಾರವಾಡ ಗ್ರಾಮಾಂತರ- ನಿಂಗಪ್ಪ ಸುತ್ತಗಟ್ಟಿಗದಗ- ರಾಜು ಕುರಡಗಿಬೆಳಗಾವಿ ನಗರ- ಗೀತಾ ಸುತಾರ್ಬೆಳಗಾವಿ ಗ್ರಾಮಾಂತರ- ಸುಭಾಷ್ ಪಾಟೀಲ್ಚಿಕ್ಕೋಡಿ- ಸತೀಶ್ ಅಪ್ಪಾಜಿಗೋಳ್ಬಾಗಲಕೋಟೆ- ಶಾಂತಗೌಡ ಪಾಟೀಲ್ವಿಜಯಪುರ- ಆರ್.ಎಸ್. ಪಾಟೀಲ್ಬೀದರ್- ಸೋಮನಾಥ ಪಾಟೀಲ್ಕಲ್ಬುರ್ಗಿ ನಗರ- ಚಂದ್ರಕಾಂತ ಪಾಟೀಲ್ಕಲ್ಬುರ್ಗಿ ಗ್ರಾಮಾಂತರ- ಶಿವರಾಜ ಪಾಟೀಲ್ ರದ್ದೇವಾಡಿಯಾದಗಿರಿ- ಅಮೀನ್ ರೆಡ್ಡಿರಾಯಚೂರು- ಡಾ. ಶಿವರಾಜ ಪಾಟೀಲ್ಕೊಪ್ಪಳ- ನವೀನ್ ಗುಳಗಣ್ಣನವರ್ಬಳ್ಳಾರಿ- ಅನಿಲ್ ಕುಮಾರ್ ಮೋಕಾವಿಜಯನಗರ- ಚನ್ನಬಸವನಗೌಡ ಪಾಟೀಲ್ದಾವಣಗೆರೆ- ರಾಜಶೇಖರ್ಚಿತ್ರದುರ್ಗ- ಎ. ಮುರಳಿತುಮಕೂರು – ಹೆಚ್.ಎಸ್. ರವಿಶಂಕರ್ಮಧುಗಿರಿ- ಬಿ.ಸಿ. ಹನುಮಂತೇಗೌಡರಾಮನಗರ- ಆನಂದಸ್ವಾಮಿಬೆಂಗಳೂರು ಗ್ರಾಮಾಂತರ- ರಾಮಕೃಷ್ಣಪ್ಪಚಿಕ್ಕಬಳ್ಳಾಪುರ-ರಾಮಲಿಂಗಪ್ಪಕೋಲಾರ- ಡಾ. ಕೆ.ಎನ್. ವೇಣುಗೋಪಾಲ್ಬೆಂಗಳೂರು ಉತ್ತರ- ಎಸ್. ಹರೀಶ್ಬೆಂಗಳೂರು ಕೇಂದ್ರ- ಸಪ್ತಗಿರಿಗೌಡಬೆಂಗಳೂರು ದಕ್ಷಿಣ- ಸಿ.ಕೆ. ರಾಮಮೂರ್ತಿ