i
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತುಮಕೂರಿನಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ-ಸಂಸದ ಬಸವರಾಜು…
ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ ಎಂದು ಹಾಲಿ ಸಂಸದ ಜಿ.ಎಸ್.ಬಸವರಾಜು ತಿಳಿಸಿದರು.ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಟಿಕೆಟ್ನೀಡಿದರೆ ಫಲಿತಾಂಶದ ಬಗ್ಗೆ ಈಗಲೇ ಏನೂ ಹೇಳಲು ಆಗುವುದಿಲ್ಲ ಎಂದು ಹೇಳುವ ಮೂಲಕ ಮಾಧುಸ್ವಾಮಿ ಪರ ನಾನಿಲ್ಲ ಎನ್ನುವ ಸಂದೇಶವನ್ನು ಸಂಸದರು ರವಾನಿಸಿದ್ದಾರೆ.ಮಾಧುಸ್ವಾಮಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ದುರಹಂಕಾರದವರಿಗೆ ಜನ ಮತ ಹಾಕುವುದಿಲ್ಲ ಎಂದು ಪರೋಕ್ಷವಾಗಿ ಮಾಧುಸ್ವಾಮಿ ವಿರುದ್ಧ ಸಂಸದರು ವಾಗ್ದಾಳಿ ಮಾಡಿದರು.
ಬಿಜೆಪಿ ಹೈಕಮಾಂಡ್ಕ್ಷೇತ್ರದಲ್ಲಿ ಪ್ರತ್ಯೇಕ ಸರ್ವೇ ಮಾಡಿಸಿ ಜನಾಭಿಪ್ರಾಯ ಪಡೆದು ಅಭ್ಯರ್ಥಿ ಘೋಷಿಸುತ್ತಾರೆ. ಆದರೆ ಬಿಜೆಪಿ ಪಕ್ಷದಿಂದ ಯಾರಿಗೆ ಟಿಕೆಟ್ಕೊಟ್ಟರೂ ಅವರ ಪರ ಕೆಲಸ ಮಾಡಿ ಗೆಲ್ಲಿಸುವ ಕಾರ್ಯ ಮಾಡುವುದಾಗಿ ಇದೇ ವೇಳೆ ಬಸವರಾಜು ತಿಳಿಸಿದರು.ತುಮಕೂರು ಕ್ಷೇತ್ರದಿಂದ ಮಾಜಿ ಸಚಿವ ವಿ.ಸೋಮಣ್ಣ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇಲ್ಲಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲಬಹುದು ಎಂದು ಸೋಮಣ್ಣ ಅವರಿಗೆ ಹೇಳಿದ್ದೇನೆ. ಮುಂದಿನ ಅಧಿವೇಶನ ಸಮಯದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ಶಾ ಸಮಯ ನೀಡಿದ್ದಾರೆ. ಆಗ ಎಲ್ಲ ವಿಷಯಗಳನ್ನು ಅವರ ಗಮನಕ್ಕೆ ತರುತ್ತೇನೆ. ವಾಸ್ತವ ಸ್ಥಿತಿಯನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.ಲೋಕಸಭಾ ಸ್ಪರ್ಧೆಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ಮುಖಂಡ ಎಸ್.ಪಿ.ಚಿದಾನಂದ್ಸೇರಿದಂತೆ ಹತ್ತಕ್ಕೂ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಕತ್ತೆ ನಿಲ್ಲಿಸಿದರೂ ಪ್ರಧಾನಿ ಮೋದಿ ಮುಖ ನೋಡಿಕೊಂಡು ಜನ ಬಿಜೆಪಿಗೆ ಮತ ನೀಡುತ್ತಾರೆ ಎಂದು ಬಸವರಾಜು ಹೇಳಿದರು.ಮಾಜಿ ಪ್ರಧಾನಮಂತ್ರಿ, ಜೆಡಿಎಸ್ವರಿಷ್ಠ ಎಚ್.ಡಿ.ದೇವೇಗೌಡರಿಗೆ ಅವರದ್ದೇ ಆದ ಶಕ್ತಿಯಿದೆ. ಅವರು ಚಾಣಾಕ್ಷರಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲೂ ದೇವೇಗೌಡರ ವಿರುದ್ಧ ನಾನು ವೈಯಕ್ತಿಕವಾಗಿ ಮಾತನಾಡಿಲ್ಲ ಎಂದು ತಿಳಿಸಿದರು. ಮಾಜಿ ಸಂಸದ ಮುದ್ದಹನುಮೇಗೌಡರು ಅನುಕೂಲಸಿಂಧು ಅಲೆಮಾರಿ ರಾಜಕಾರಣಿ ಆಗಿದ್ದು ಅವರ ರಾಜಕೀಯ ನಡೆಯಿಂದ ಗೊತ್ತಾಗಿದೆ. ಅವರು ಸ್ವಾರ್ಥಕ್ಕಾಗಿ ಯಾವುದೇ ಪಕ್ಷಕ್ಕೆ ಜಿಗಿಯಬಲ್ಲರು. ಅಂಥವರು ಕೇವಲ ಟಿಕೆಟ್ಗಾಗಿ ಪಕ್ಷಕ್ಕೆ ಬರುವುದು ಸರಿಯಲ್ಲ ಎಂದು ಹೇಳಿದರು. ಮುದ್ದಹನುಮೇಗೌಡರು ಯಾವುದೇ ಫಲಾಪೇಕ್ಷೆ ಇಲ್ಲದೆ ಪಕ್ಷಕ್ಕೆ ಬರುವುದಾದರೆ ಬರಲಿ. ಈ ಕುರಿತು ಅವರು ಮುಚ್ಚಳಿಕೆ ಬರೆದುಕೊಡಲಿ ಎಂದು ಇದೇ ವೇಳೆ ಅವರು ಸೂಕ್ಷ್ಮವಾಗಿ ಹೇಳಿದರು.