i
ಆದಿಚುಂಚನಗಿರಿ ಸ್ವಾಮೀಜಿಯವರು ರಾಜಕೀಯ ಗುರುಗಳಲ್ಲ, ರಾಜ ಗುರುಗಳು-ಟಿಬಿಜೆ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ರಾಜಕೀಯ ಗುರುಗಳಲ್ಲ, ರಾಜ ಗುರುಗಳು, ರಾಜಕೀಯದಿಂದ ಬಹಳ ದೂರ ಇದ್ದು ಸಮಾಜ ಸೇವೆ ಮಾಡುತ್ತಿದ್ದಾರೆಂದು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಯುಗಯೋಗಿ ‘ಪದ್ಮಭೂಷಣ‘ ಪುರಸ್ಕೃತ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 79ನೇ ಜಯಂತ್ಯುತ್ಸವ ಮತ್ತು 11ನೇ ವರ್ಷದ ಸಂಸ್ಮರಣಾ ಮಹೋತ್ಸವ ಹಾಗೂ ಮಾತೃ ಸಂಗಮ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ಅನ್ನ, ಅಕ್ಷರ, ಅಭಿವೃದ್ಧಿ, ಪರಿಸರ ಸಂರಕ್ಷಣೆಯಂತಹ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಚುಂಚನಗಿರಿ ಮಠ ಶಿಕ್ಷಣ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಿದೆ. ಸಮಾಜಕ್ಕೆ ಶ್ರೀಮಠದ ಕೊಡಿಗೆ ಅಪಾರ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶರಾದ ವಿ.ಗೋಪಾಲಗೌಡ ಅವರು ಮಾತನಾಡಿ, ಸಮಾಜ ಅಪಾಯದ ಕಡೆ ಸಾಗುತ್ತಿದೆ. ಅತಿ ಚಿಕ್ಕ ವಯಸ್ಸಿನಲ್ಲೇ ವಿಚ್ಚೇದನಗಳು ನಡೆಯುತ್ತಿರುವುದು ಅಪಾಯದ ಮುನ್ಸೂಚನೆ, ಇದಕ್ಕೆ ವಿದ್ಯಾವಂತರಾದ ಯುವತಿ ಯುವಕರು ಅವಕಾಶ ನೀಡಬಾರದು. ಕೌಟುಂಬಿಕ ಕಲಹಗಳು ಹೆಚ್ಚುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿ ಅನೂನ್ಯತೆಯಿಂದ ಜೀವನ ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು, ಕೃಷಿ ಕ್ಷೇತ್ರ ಮತ್ತು ಇತರೆ ಕ್ಷೇತ್ರಗಳಲ್ಲಿ ಮಹಿಳೆಯರು ಅಭಿವೃದ್ಧಿ ಪಥದತ್ತ ಸಾಗಬೇಕು, ಎಲ್ಲಕ್ಕಿಂತ ಮೊದಲು ಉದ್ಯಮಿಗಳಾಗ ಹೊರ ಹೊಮ್ಮಬೇಕು ಎಂದು ಕರೆ ನೀಡಿದರು.
ಮಾಜಿ ವಿಪ ಸದಸ್ಯೆ ತೇಜಸ್ವಿನಿಗೌಡ ಮಾತನಾಡಿ ಆದಿಚುಂಚನ ಗಿರಿ ಮಠ ಎಲ್ಲ ಮಹಿಳೆಯರಿಗೂ ತವರು ಮನೆ ಇದ್ದ ಹಾಗೆ. ಪ್ರತಿಯೊಬ್ಬ ಮಹಿಳೆಯರು ಶ್ರೀಮಠಕ್ಕೆ ಬಂದು ಹೋಗುವ ಕೆಲಸ ಮಾಡಬೇಕು ಎಂದು ತಿಳಿಸಿದರು.ಮಾಜಿ ಸಚಿವ ಸಿ.ಟಿ ರವಿ ಮಾತನಾಡಿ, ನನ್ನ ಬಹುತೇಕ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಮಹತ್ವದಾಗಿದೆ. ಆ ತಾಯಿ ಋಣ ತೀರಿಸಲು ಸಾಧ್ಯವಿಲ್ಲ, ತಾಯಿ ಸೇವೆ ನಡೆದು ರವಿಯವರು ಭಾವುಕರಾದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.ರಾಜ್ಯದ ಎಲ್ಲ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದರು. ಚಿತ್ರದುರ್ಗ ಮತ್ತು ಹಿರಿಯೂರು ಭಾಗದಿಂದ ಚಿತ್ರದುರ್ಗ ಜಿಲ್ಲಾ ಚುಂಚಾದ್ರಿ ಮಹಿಳಾ ಪ್ರತಿಷ್ಠಾನದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದರು. ಚಿತ್ರದುರ್ಗ ಮತ್ತು ಹಿರಿಯೂರು ತಾಲೂಕಿನ ಮಹಿಳೆಯರಿಗೆ ಬಸ್ ವ್ಯವಸ್ಥೆಯನ್ನು ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರು ಹಾಗೂ ಬಿಬಿಎಂಪಿ ಡೆಪ್ಯೂಟಿ ಕಮಿಷನರ್ ಬೇತೂರು ಪಾಳ್ಯ ಜೆ.ರಾಜು ಮಾಡಿದ್ದರು.