i
ಫ್ರೀಡಂ ಪಾರ್ಕಿಗೆ ಅಲ್ಲಮಪ್ರಭು, ಕರ್ನಾಟಕಕ್ಕೆ ಬಸವಣ್ಣ ಸಂಪುಟ ಸಭೆ ಅಸ್ತು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಕ್ಕೆಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.“ಶಿವಮೊಗ್ಗದ ೪೬.೩೨ ಎಕರೆ ವಿಸ್ತೀರ್ಣದ ಜೈಲು ಆವರಣದ ಮೈದಾನಕ್ಕೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವ ಮೂಲಕ ಜಿಲ್ಲೆಯ ಜನತೆಯ ದಶಕಗಳ ಕನಸನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ನನಸು ಮಾಡಿದೆ,” ಮಧು ಬಂಗಾರಪ್ಪ ಎಂದು ಹೇಳಿದ್ದಾರೆ.“೧೨ನೇ ಶತಮಾನದ ಒಬ್ಬ ಪ್ರಸಿದ್ಧ ಕವಿ, ತತ್ತ್ವ ಜ್ಞಾನಿ ಅಲ್ಲಮಪ್ರಭುಗಳು ಶಿಕಾರಿಪುರದ ಬಳ್ಳಿಗಾವೆಯವರು. ಅವರು ನಮ್ಮ ಶಿವಮೊಗ್ಗ ಜಿಲ್ಲೆಯವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಹೀಗಾಗಿ ಶಿವಮೊಗ್ಗ ಫ್ರೀಡಂ ಪಾರ್ಕ್ಗೆ ಅಲ್ಲಮಪ್ರಭು ಅವರ ಹೆಸರಿಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿತ್ತು.ಇದಕ್ಕಾಗಿ ಇಡೀ ಜಿಲ್ಲೆಯ ಜನರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.ಬಸವಣ್ಣರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ನೆಂದು ಘೋಷಿಸಲು ನಿರ್ಧರಿಸಿದ ರಾಜ್ಯ ಸರ್ಕಾರ-ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ ಅವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.“ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ. ನಮ್ಮ ಸರ್ಕಾರದ ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ಅತೀವ ಹೆಮ್ಮೆ ಮತ್ತು ತೃಪ್ತಿಯನ್ನು ಉಂಟು ಮಾಡಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ” ಎಂದು ಸಿಎಂ ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.