i
ರೈತ ಸಂಘದ ಜಿಲ್ಲಾಧ್ಯಕ್ಷ ಹೃದಯಾಘಾತದಿಂದ ನಿಧನ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ರೈತ ಸಂಘದ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಸ್. ಶಿವಮೂರ್ತಿ ಹೃದಯಾಘಾತದಿಂದ ನಮ್ಮನ ಬಿಟ್ಟು ಅಗಲಿದ್ದಾರೆ ಎಂಬ ವಿಷಯವನ್ನು ತಿಳಿಸಲು ದುಃಖವಾಗುತ್ತಿದೆ.
ರೈತ ಸಂಘದ ಪ್ರಾರಂಭದಿಂದಲೂ ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಾಮಾಣಿಕವಾಗಿ ರೈತ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಹಾಲಿ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಅಗಲಿಕೆ ರೈತ ಸಂಘಕ್ಕೆ ತುಂಬಲಾರದ ನಷ್ಟವಾಗಿದೆ. ಇವರ ಸ್ವಗ್ರಾಮವಾದ ನಾಗಸಮುದ್ರದಲ್ಲಿ ಅಂತಿಮ ವಿಧಿವಿಧಾನವನ್ನು ನೆರವೆರಿಸಲಾಗುವುದು.