i
ದಾವಣಗೆರೆಯಲ್ಲಿ ಫೆಬ್ರವರಿ 3 ಮತ್ತು 4ರಂದು ಪತ್ರಕರ್ತರ 38ನೇ ರಾಜ್ಯ ಸಮ್ಮೇಳನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪತ್ರಕರ್ತರ ಸಂಘದ 38ನೇ ರಾಜ್ಯ ಸಮ್ಮೇಳನ ದಾವಣಗೆರೆಯಲ್ಲಿ ಇದೆ ಫೆಬ್ರವರಿ 3 ಮತ್ತು 4ರಂದು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ರವರನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಸಮ್ಮೇಳನದ ಅಂತಿಮ ರೂಪುರೇಶದ ಬಗ್ಗೆ ಚರ್ಚಿಸಿ ಅಂತಿಮ ಮಾಡಲಾಯಿತು.ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿಜಿ ಸಿಲೋಕೇಶ್, ದಾವಣಗೆರೆ ಜಿಲ್ಲಾಧ್ಯಕ್ಷ ಇಎಮ್ ಮಂಜುನಾಥ, ಪ್ರಧಾನ ಕಾರ್ಯದರ್ಶಿ ಎ ಪಕ್ರುದ್ದೀನ್, ದಾವಣಗೆರೆ ವರದಿಗಾರರ ಕೂಟದ ಅಧ್ಯಕ್ಷ ಕೆ ಏಕಂತಪ್ಪ, ಬಿಎನ್ ಮಲ್ಲೇಶ್, ಭಾಮ ಬಸವರಾಜಯ್ಶ, ರಾಷ್ಟ್ರೀಯ ಮಂಡಳಿ ಸದಸ್ಯ ಎಸ್ ಕೆ ಒಡೆಯರ್, ಖಜಾಂಚಿ ಬದ್ರಿನಾಥ್, ಕಾರ್ಯದರ್ಶಿ ಜೆಎಸ್ ವೀರೇಶ್, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ಕಿಷ್ಣೋಜಿ ರಾವ್, ರುದ್ರೇಶ್ ಇತರರು ಉಪಸ್ಥಿತರಿದ್ದರು.