i
ಹೋರಿ ತಿವಿದು ಯುವಕ ಸಾವು…
ಚಂದ್ರವಳ್ಳಿ ನ್ಯೂಸ್, ಶಿಕಾರಿಪುರ:
ಶಿಕಾರಿಪುರ ತಾಲ್ಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಯುವಕ ಹೋರಿ ತಿವಿದು ಮೃತಪಟ್ಟಿದ್ದಾರೆ.
ಸ್ಪರ್ಧೆಯಲ್ಲಿ ಪಾಲ್ಗೊಂಡು ಹೋರಿ ಹಿಡಿಯುವ ಸಾಹಸದಲ್ಲಿ ಭಾಗಿಯಾಗಿದ್ದ ಈಸೂರು ಗ್ರಾಮದ ನಿವಾಸಿ ಪರಶುರಾಮ (27) ಮೃತಪಟ್ಟವರು.
ಅವರ ಸಹೋದರ ಯೋಗೀಶ್ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.