i
ಭಾರತೀಯರ ಶತಮಾನಗಳ ಕನಸು ನನಸಾಗಿದೆ: ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಅಯೋಧ್ಯೆ:
ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದು, ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ ಎಂದು ಹೇಳಿದ್ದಾರೆ.
ಕುಟುಂಬ ಸಮೇತ ಅಯೋಧ್ಯೆಗೆ ತೆರಳಿದ ಹೆಚ್ಡಿ ದೇವೇಗೌಡ-ಅಯೋಧ್ಯೆಯಲ್ಲಿ ಇಂದು ರಾಮ ಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಕುಟುಂಬ ಸಮೇತ ಅಯೋಧ್ಯೆಗೆ ತೆರಳಿದ್ದಾರೆ. ದೇವೇಗೌಡರು, ಪತ್ನಿ ಚೆನ್ನಮ್ಮ, ಕುಮಾರಸ್ವಾಮಿ, ನಿಖಿಲ್ ಹೆಚ್ಎಎಲ್ನಿಂದ ಪ್ರೈವೆಟ್ ಜೆಟ್ನಲ್ಲಿ ತೆರಳಿದ್ದಾರೆ.