i
ಕಾರು ಮರಕ್ಕೆ ಡಿಕ್ಕಿ, ಸ್ಥಳದಲ್ಲೇ ಇಬ್ಬರ ಸಾವು, ಓರ್ವನ ಸ್ಥಿತಿ ಚಿಂತಾಜನಕ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಕಳೆದ ಕೆಲವು ತಿಂಗಳುಗಳಿಂದ ನಿಯಂತ್ರಣದಲ್ಲಿದ್ದ ಅಪಘಾತ ಪ್ರಕರಣಗಳು ಪುನಃ ಆರಂಭವಾಗಿದ್ದು, ಅನೇಕ ಸಂದರ್ಭಗಳಲ್ಲಿ ವಾಹನ ಚಾಲಕರ ಅಜಾಗರೂಕತೆಯಿಂದ ಘಟನೆಗಳು ಸಂಭವಿಸುತ್ತಿದೆ ಎನ್ನಲಾಗಿದೆ. ತಾಲ್ಲೂಕಿನ ಕುರುಡಿಹಳ್ಳಿ ಗೇಟ್ ಬಳಿ ಮಂಗಳವಾರ ತಡರಾತ್ರಿ ಸುಮಾರು ೧೦.೩೦ರ ಸಮಯದಲ್ಲಿ ಚಿತ್ರದುರ್ಗದಿಂದ ಚಳ್ಳಕೆರೆ ಕಡೆಗೆ ಆಗಮಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಿತ್ರಯ್ಯನಹಟ್ಟಿಯ ಗುತ್ತಿಗೆದಾರ ಜೆ.ಪಿ.ವೆಂಕಟೇಶ್(೫೫), ಸೂಜಿಮಲ್ಲೇಶ್ವರ ನಗರದ ವೆಂಕಟೇಶ್(೫೫) ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಕಿಶೋರ್(೩೧) ತೀರ್ವವಾಗಿ ಗಾಯಗೊಂಡು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿ ಹೊಡೆದ ಕೂಡಲೇ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತ ಶವಗಳನ್ನು ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿರಿಸಿ ಚಾಲಕ ಕಿಶೋರನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ಧಾರೆ.
ಜಿಲ್ಲಾ ರಕ್ಷಣಾಧಿಕಾರಿ ಭೇಟಿ: ಕುರುಡಿಹಳ್ಳಿ ಗ್ರಾಮದ ಬಳಿ ಹುಣಸೆ ಮರಕ್ಕೆ ಕಾರು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಜಿಲ್ಲಾ ರಕ್ಷಣಾಧಿಕಾರಿ ಧರ್ಮೇಂದ್ರಕುಮಾರ್ಮೀನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿವೈಎಸ್ಪಿ ರಾಜಣ್ಣ, ಇನ್ಸ್ಪೆಕ್ಟರ್ ರಾಜಫಕೃದ್ದೀನ್ ದೇಸಾಯಿ ಉಪಸ್ಥಿತರಿದ್ದರು. ಪಿಎಸ್ಐ ಧರೆಪ್ಪಬಾಳಪ್ಪದೊಡ್ಡಮನಿ ಪ್ರಕರಣ ದಾಖಲಿಸಿದ್ದಾರೆ.