i
ಪೂನಂ ಪಾಂಡೆ ಸಾವಿನ ಪ್ರಕರಣದಲ್ಲಿ ಎಡವಿದ ಮಾಧ್ಯಮಗಳು: ಕೆ.ವಿ.ಪ್ರಭಾಕರ್…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಬಾಲಿವುಡ್ ನಟಿ ಪೂನಂಪಾಂಡೆ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ದೊಡ್ಡ ಸುದ್ದಿ ಮಾಡಿ ಸಾವಿನ ಬಗ್ಗೆ ವಿಶ್ಲೇಷಣೆಯನ್ನೂ ಮಾಡಿಬಿಟ್ಟರು. ಆದರೆ, ಪೂನಂ ಪಾಂಡೆ ಬದುಕೇ ಇದ್ದಾರೆ. ಸಾವಿನ ಸುದ್ದಿಯನ್ನಾದರೂ ಪ್ರಕಟಿಸುವ ಮೊದಲು ಪರಿಶೀಲಿಸಿಕೊಳ್ಳದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಅವರು ಇಂಥಾ ಪ್ರಕರಣಗಳಿಂದ ಪತ್ರಕರ್ತರು ಮತ್ತು ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಉಳಿಯಲು ಸಾಧ್ಯವಿಲ್ಲ ಎಂದರು.
ಅಭಿವೃದ್ಧಿ ಪತ್ರಿಕೋದ್ಯಮ ಹಿಂದೆ ಸರಿದು ಊಹಾ-ಫೋಹ ಪತ್ರಿಕೋದ್ಯಮಕ್ಕೆ ಆದ್ಯತೆ ನೀಡಿದ್ದರಿಂದಲೇ ಪೂನಂಪಾಂಡೆ ತರದ ಘಟನೆಗಳು ಘಟಿಸಿ ಬಿಡುತ್ತವೆ ಎಂದರು.