![](https://www.chandravallinews.com/wp-content/uploads/2024/02/WhatsApp-Image-2024-02-08-at-10.19.01-PM.jpeg)
i
ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮದವರಿಗೆ ತರಬೇತಿ ಶಿಬಿರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮದ ರಾಜಕೀಯ ವರದಿಗಾರರಿಗೆ ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವ ದಿ ಕ್ಯಾಪಿಟಲ್ ಹೋಟಲ್ನ ಕ್ರಿಸ್ಟಲ್ ರೂಂ ನಲ್ಲಿ ಫೆಬ್ರವರಿ 09 ರಂದು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆ ವರೆಗೆ ಕರ್ನಾಟಕ ವಿಧಾನ ಮಂಡಲದ ತರಬೇತಿ ಸಂಸ್ಥೆ ವತಿಯಿಂದ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿ ಶಿಬಿರದ ಉದ್ಘಾಟನೆಯನ್ನು ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಗಳಾದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಅವರು ನೆರವೇರಿಸಲಿರುವರು. ವಿಧಾನ ಸಭೆಯ ಮಾನ್ಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್ ಹಾಗೂ ಕನ್ನಡ ಪ್ರಭ ದಿನ ಪತ್ರಿಕೆಯ ಪ್ರಧಾನ ಸಂಪಾದಕ ರವಿ ಹೆಗಡೆ ಅವರು ಉಪಸ್ಥಿತರಿರುವರು.
ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಅಪ್ಪಾಜಿ ಸಿ.ಎಸ್. ನಾಡಗೌಡ ಪ್ರಶ್ನೋತ್ತರ, ಶೂನ್ಯವೇಳೆ, ಗಮನ ಸೆಳೆಯುವ ಮತ್ತು ಇತರೆ ಸೂಚನೆಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರರು(ಮಾಜಿ) ದಿನೇಶ್ ಅಮಿನ ಮಟ್ಟು ಅವರು ಶಾಸಕಾಂಗ ಮತ್ತು ಪತ್ರಿಕಾ ರಂಗದ ಸಂಬಂಧಗಳು ಹಾಗೂ ವರದಿಗಾರಿಕೆ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.