![](https://www.chandravallinews.com/wp-content/uploads/2024/02/793916327vidhansoudha_Main.jpg)
i
16ನೇ ವಿಧಾನ ಸಭೆಯ ಸದಸ್ಯರುಗಳಿಗೆ “ಆಯವ್ಯಯದ” ಕುರಿತು ತರಬೇತಿ ಶಿಬಿರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
16ನೇ ವಿಧಾನ ಸಭೆಯ ಸದಸ್ಯರುಗಳಿಗೆ ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವ ದಿ ಕ್ಯಾಪಿಟಲ್ ಹೋಟಲ್ನ ವೈಟ್ ಹೌಸ್ನಲ್ಲಿ ಫೆಬ್ರವರಿ 09 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4.00 ಗಂಟೆ ವರೆಗೆ ಕರ್ನಾಟಕ ವಿಧಾನ ಮಂಡಲದ ತರಬೇತಿ ಸಂಸ್ಥೆ ವತಿಯಿಂದ “ಆಯವ್ಯಯದ” ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿ ಶಿಬಿರದ ಉದ್ಘಾಟನೆಯನ್ನು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನೆರವೇರಿಸಲಿರುವರು. ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್ ಹಾಗೂ ಕನ್ನಡಪ್ರಭ ದಿನ ಪತ್ರಿಕೆಯ ಪ್ರಧಾನ ಸಂಪಾದಕ ರವಿ ಹೆಗಡೆ ಅವರು ಉಪಸ್ಥಿತರಿರುವರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಆಯವ್ಯಯ – ಅನುದಾನಗಳ ಬಳಕೆ, ನಿರ್ವಹಣೆ ಕುರಿತು ಮಾಹಿತಿಯನ್ನು ನೀಡಲಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿಗಳಾದ ಬಿ.ಎಲ್. ಶಂಕರ್ ಅವರು ವಿಧೇಯಕಗಳ ಮೇಲಿನ ಚರ್ಚೆಯಲ್ಲಿ ಶಾಸಕರ ಭಾಗವಹಿಸುವಿಕೆ ಕುರಿತು ಮಾಹಿತಿ ನೀಡಲಿರುವರು. ತರಬೇತಿ ಶಿಬಿರದಲ್ಲಿ “ಭಾರತ ಸಂವಿಧನ” ವಿಷಯದ ಕುರಿತು ರಸಪ್ರಶ್ನೆ ಕಾರ್ಯಕ್ರಮ ಹಾಗೂ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ನಿವೃತ್ತ) ಡಾ. ಎಂ.ಆರ್ ಶ್ರೀನಿವಾಸಮೂರ್ತಿ ಅವರು ಆಯವ್ಯಯ-ರಾಜಸ್ವಗಳ ಸಂಗ್ರಹಣೆ, ಅನುದಾನಗಳ ವರ್ಗೀಕರಣ ಮತ್ತು ಹಂಚಿಕೆ ಕುರಿತು ಮಾಹಿತಿಯನ್ನು ನೀಡಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.