![](https://www.chandravallinews.com/wp-content/uploads/2024/02/WhatsApp-Image-2024-02-11-at-11.45.41-AM-2.jpeg)
i
ಮಹಿಳೆ ಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸಲು ಒತ್ತಾಯಿಸಿ ಪ್ರತಿಭಟನೆ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶಿವಮೊಗ್ಗ ನಗರದ ಅನ್ನಪೂರ್ಣಾ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಈ ಘಟನೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿತು. ಜ. ೩೦ರಂದು ಶಿವಮೊಗ್ಗ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅನ್ನಪೂರ್ಣಮ್ಮ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ, ಮೈಮೇಲಿನ ಬೆಲೆ ಬಾಳುವ ಬಂಗಾರ ಇನ್ನಿತರ ವಸ್ತುಗಳನ್ನು ದೋಚಿದ್ದಾರೆ. ಮೃತ ದೇಹವನ್ನು ರೈಲಿನಿಂದ ಆಚೆ ಎಸೆದಿದ್ದಾರೆ. ಇಷ್ಟು ದಿನವಾದರೂ ಆರೋಪಿಗಳನ್ನು ಪತ್ತೆ ಹಚ್ಚಲು ರೈಲ್ವೆ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದರು.
ರೈಲ್ವೆಯಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಸುರಕ್ಷಿತವಿಲ್ಲ ಎಂಬುವುದಕ್ಕೆ ಇದೇ ಸಾಕ್ಷಿಯಾಗಿದೆ. ಬೋಗಿಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ರೈಲ್ವೆ ರಕ್ಷಣಾ ಪಡೆಯನ್ನು ಹೆಚ್ಚಿಸಬೇಕು, ಸೂಕ್ತ ವ್ಯವಸ್ಥೆ ಕಲ್ಪಿಸಬೇಕು, ಜೊತೆಗೆ ಇಡೀ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಒತ್ತಾಯಿಸಿದ್ದು, ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದ ಅಧ್ಯಕ್ಷೆ ಭಾರತಿ ರಾಮಕೃಷ್ಣ, ಕಾರ್ಯದರ್ಶಿ ಟಿ.ನೇತ್ರಾವತಿ, ಪ್ರಮುಖರಾದ ಮಮತಾ ರಾಘವೇಂದ್ರ, ನಾಗರತ್ನಮ್ಮ, ಸುಜಾತಾ ನಿಂಗೇಗೌಡ, ಮಾಲಾ ರಾಮಪ್ಪ, ಮಂಗಳಾ ಲಕ್ಷ್ಮೀ, ಅನುರಾಧ, ಶಶಿಕಲಾ, ಮಂಜುಳಾ ರವಿ , ಸರೋಜಮ್ಮ, ಶೈಲಾ, ಶೋಭಾ ಸೇರಿದಂತೆ ಹಲವರಿದ್ದರು.