i
ರೈತರ ಸಮಸ್ಯೆ ಪರಿಹಾರಕ್ಕೆ ಸಿಎಂ ಗೆ ಮನವಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಪೂರ್ವಭಾವಿಯಾಗಿ ಕರೆದಿದ್ದ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್ ಬಸವರಾಜಪ್ಪನವರು ಭಾಗವಹಿಸಿ ರಾಜ್ಯದ ರೈತರ ಸಂಪೂರ್ಣ ಸಾಲಮನ್ನಾ, ಬರಗಾಲಕ್ಕೆ ಎಕರೆಗೆ-20 ಸಾವಿರ ಪರಿಹಾರ, ರೈತ ವಿರೋಧಿ ಕೃಷಿ ಕಾಯ್ದೆಗಳ ರದ್ದು ಮಾಡುವ ಬಗ್ಗೆ ಒತ್ತಾಯಿಸಿದರು.
ವಿದ್ಯುತ್ ಖಾಸಗೀಕರಣ ಮಾಡಬಾರದು ಮತ್ತು IP ಸೆಟ್ ಗಳನ್ನ ರೈತರೆ ಸ್ವಯಂ ವೆಚ್ಚದಲ್ಲಿ ಹಾಕಿಸಿಕೊಳ್ಳುವುದನ್ನು ಹಿಂಪಡೆಯಬೇಕು, ಕಬ್ಬಿನ ಬಾಕಿ ಹಣ ಕೊಡಿಸುವುದು ಮತ್ತು ಸಮಸ್ಯೆಗಳನ್ನು ಪರಿಹರಿಸುವುದು ಇನ್ನೂ ರೈತರ ಅನೇಕ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಚರ್ಚಿಸಿ ಪರಿಹರಿಸುವಂತೆ ಒತ್ತಾಯಿಸಲಾಯಿತು.
ಈ ಸಂಧರ್ಭದಲ್ಲಿ ಸಚಿವರುಗಳಾದ ಶಿವಾನಂದ ಪಾಟೀಲ್, ವೆಂಕಟೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳು ಹಾಗೂ ರೈತ ಸಂಘಟನೆ ಪ್ರಮುಖ ಮುಖಂಡರು ಹಾಜರಿದ್ದರು.