i
ಪತ್ರಿಕಾ ವಿತರಕರಿಗೆ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಲು ಮನವಿ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಪತ್ರಿಕಾ ವಿತರಕರಿಗೆ ಸಮುದಾಯ ಭವನ ನಿರ್ಮಾಣಕ್ಕಾಗಿ ನಿವೇಶನ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಪತ್ರಿಕಾ ವಿತರಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಹೆಮ್ಮೆಯ ವಿಷಯವೇ ಆಗಿದೆ. ಅಪಘಾತ ವಿಮೆಯನ್ನು ಘೋಷಣೆ ಮಾಡಿದ್ದೀರಿ. ಆದರೆ,ಇನ್ನೂ ಕೆಲವು ಸಮಸ್ಯೆಗಳಿವೆ. ಈ ಬಾರಿಯ ಬಜೆಟ್ನಲ್ಲಿ ಪತ್ರಿಕಾ ವಿತರಕರಿಗಾಗಿ ಕನಿಷ್ಟ ೫ ಕೋಟಿ ರೂ.ಗಳ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು. ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡಬೇಕು. ಜಿಲ್ಲಾ ಕೇಂದ್ರದ ಪತ್ರಿಕಾ ವಿತರಕರಿಗೆ ನಿವೇಶನ ನೀಡಬೇಕು. ಎಲೆಕ್ಟ್ರಿಕಲ್ ಬೈಕ್ಗಳನ್ನು ಕೊಳ್ಳಲು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಬೇಕು ಎಂಬುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಮಾಲತೇಶ್, ಪ್ರಧಾನ ಕಾರ್ಯದರ್ಶಿ ಮುಕ್ತಾರ್ ಅಹಮ್ಮದ್, ಪರಶುರಾಮರಾವ್, ಅಜಾದುಲ್ಲಾ, ಪ್ರಾಣೇಶ್, ಮಲ್ಲಿಕಾರ್ಜುನ, ಸೋಮಶೇಖರ್ ಸೇರಿದಂತೆ ಹಲವರಿದ್ದರು.