i
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ 2024-25ನೇ ಸಾಲಿಗೆ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ದಾಳಿಂಬೆ, ಅಂಗಾಂಶ ಬಾಳೆ, ಡ್ರಾಗನ್ ಪ್ರೂಟ್ ಹಣ್ಣಿನ ಬೆಳೆಗಳ, ಹೈಬ್ರಿಡ್ ತರಕಾರಿ, ಸುಗಂಧರಾಜ ಹೂವುಗಳು, ಬಿಡಿ ಹೂವುಗಳು, ಪ್ರದೇಶ ವಿಸ್ತರಣೆ, ಸಮುದಾಯ ನೀರು ಸಂಗ್ರಹಣಾ ಘಟಕ, ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಪ್ಲಾಸ್ಟಿಕ್ ಮಲ್ಚಿಂಗ್, ನೆರಳು ಪರದೆ, ಪ್ಯಾಕ್ ಹೌಸ್, ಹಾಗೂ ಈರುಳ್ಳಿ ಶೇಖರಣ ಘಟಕಗಳಿಗೆ ಸಹಾಯಧನ ಪಡೆಬಹುದು. ಆಸಕ್ತ ರೈತ ಫಲಾನಿಭವಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಇಲಾಖೆ ಕಛೇರಿ ಸಂಪರ್ಕಿಸಬಹದು ಎಂದು ಪ್ರಕಟಣೆ ತಿಳಿಸಿದೆ.