i
ರೈತರು ಕಮಿಷನ್ ನೀಡದೆ ಕೃಷಿ ಉತ್ಪನ್ನಗಳ ಮಾರಾಟ ಮಾಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಎಪಿಎಂಸಿಗಳಲ್ಲಿ ಮಾರಾಟ ಮಾಡಬೇಕು. ಈ ಸಂದರ್ಭದಲ್ಲಿ ದಲ್ಲಾಳಿಗಳಿಗೆ ಕಮಿಷನ್ ನೀಡದೆ, ಬಿಳಿ ಚೀಟಿಯನ್ನು ತಿರಸ್ಕರಿಸಿ ಅಧಿಕೃತ ಲೆಕ್ಕ ತಿರುವಳಿ ಪಟ್ಟಿಯನ್ನು ಕೇಳಿ ಪಡೆಯಬೇಕು. ಎಲೆಕ್ಟ್ರಾನಿಕ್ ಯಂತ್ರಗಳ ಮೂಲಕ ತೂಕ ಮಾಡಿಸಿದ ನಂತರ ಹಣ ಕೇಳಿ ಪಡೆಯುವ ಮೂಲಕ ಕೃಷಿ ಉತ್ಪನ್ನಗಳಿಗೆ ರೈತರು ಸ್ಪರ್ಧಾತ್ಮಕ ಬೆಲೆ ಪಡೆಯಬಹುದಾಗಿದೆ. ಮಾರಾಟ ಸಮಯದಲ್ಲಿ ಸಮಸ್ಯೆಗಳು ಉದ್ಬವಿಸಿದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ.