![](https://www.chandravallinews.com/wp-content/uploads/2024/02/WhatsApp-Image-2024-02-12-at-10.13.35-PM.jpeg)
i
ಶಾಸಕಿ ಪುತ್ರನಿಂದ ಪೊಲೀಸ್ ಪೇದೆಗೆ ಹಲ್ಲೆ, ಎಫ್ಐಆರ್ ದಾಖಲು…
ಚಂದ್ರವಳ್ಳಿ ನ್ಯೂಸ್, ರಾಯಚೂರು:
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ತಡೆದ ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರ ಸೇರಿ ಸಂತೋಷ ಹಾಗೂ ಇತರ ಏಳು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ದೇವದುರ್ಗ ಪೊಲೀಸ್ ಠಾಣೆಯಲ್ಲಿ ನಿಯೋಜಿತರಾಗಿರುವ ಕಾನ್ಸ್ಟೆಬಲ್ ಹನುಮಂತರಾಯ ಅವರು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ತಡೆದು ವಾಹನ ಮತ್ತು ಅದರ ಚಾಲಕನನ್ನು ತನಿಖೆಗಾಗಿ ಠಾಣೆಗೆ ಕರೆದೊಯ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.