i
ಅಂಗನವಾಡಿ, ಶಾಲೆ, ಹಾಸ್ಟೆಲ್ಗಿಳ ಆಹಾರ ಸುರಕ್ಷತೆ ನೊಂದಣಿ ಕಡ್ಡಾಯ- ಜಿಲ್ಲಾಧಿಕಾರಿ ವೆಂಕಟೇಶ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: Anganwadi, school, hostel food safety register mandatory – Collector Venkatesh…
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮ ಹಾಗೂ ನಿಬಂಧನೆಗಳ ಅನುಸಾರ ಅಂಗನವಾಡಿ, ಶಾಲೆ, ಹಾಸ್ಟೆಲ್ಗಿಳು ಆಹಾರ ಸುರಕ್ಷತೆ ನೊಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಗುಣಮಟ್ಟದ ಖಾತ್ರಿ ಕುರಿತು ನಿಯಮಿತವಾಗಿ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್.ಟಿ ಸೂಚನೆ ನೀಡಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಹಾರ ಸೇವಿಸುವ ಮಕ್ಕಳ ಸುರಕ್ಷತೆ ಪ್ರಮುಖವಾದದು. ಮಧ್ಯಾಹ್ನದ ಬಿಸಿ ಊಟ ನೀಡುವ ಶಾಲೆಗಳು, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಸ್ಟೆಲ್ಗ ಳು, ಅಂಗನವಾಡಿಗಳು ತಪ್ಪದೇ ಆಹಾರ ಸುರಕ್ಷತೆಯ ನೊಂದಣಿ ಮಾಡಿಕೊಳ್ಳಬೇಕು. ಮಕ್ಕಳಿಗೆ ಊಟ ತಯಾರಿಸುವ ಬಾಣಸಿಗರು ಹಾಗೂ ಬಡಿಸುವರ ವೈದ್ಯಕೀಯ ಪ್ರಮಾಣ ಪತ್ರ ಪಡೆಯಬೇಕು. ಇಲ್ಲಿ ಬಳಸುವ ನೀರಿನ ಪರೀಕ್ಷೆ ಮಾಡಿಸಬೇಕು. ಅಡುಗೆಗೆ ಬಳಸುವ ಆಹಾರ ಪದಾರ್ಥಗಳ ಗುಣಮಟ್ಟದ ಜೊತೆಗೆ ಸ್ಪಚ್ಛತೆಗೂ ಆದ್ಯತೆ ನೀಡಬೇಕು. ಆಹಾರ ಸುರಕ್ಷತೆ ಪ್ರಮಾಣ ಪತ್ರ ಪಡೆಯುವುದರಿಂದ ಅಡುಗೆ ತಯಾರಕರು ಮಾನಸಿಕವಾಗಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುತ್ತಾರೆ ಎಂದರು.
ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪಾಲಾಕ್ಷ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೆ 450 ಶಾಲೆಗಳು ನೊಂದಣಿ ಮಾಡಿಕೊಂಡಿದ್ದು, ಇನ್ನೂ ಸುಮಾರು 2,000 ಶಾಲೆಗಳ ನೊಂದಣಿ ಬಾಕಿಯಿದೆ. ಶಾಲೆ, ಹಾಸ್ಟೆಲ್, ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಸುರಕ್ಷತೆ ಹಾಗೂ ಪಾಲಿಸಬೇಕಾದ ನಿಯಮಗಳ ಕುರಿತು ಕಾರ್ಯಗಾರ ಆಯೋಜಿಸಲಾಗುತ್ತಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಮಾತಾಡಿ, ಜಿಲ್ಲೆಯಲ್ಲಿ 2,428 ಅಂಗನವಾಡಿ ಕೇಂದ್ರಗಳಿಗೆ. ಇದರಲ್ಲಿ ಕೇವಲ 2 ಅಂಗನವಾಡಿಗಳು ಮಾತ್ರ ಆಹಾರ ಸುರಕ್ಷತೆಯ ನೊಂದಣಿ ಮಾಡಿಕೊಂಡಿವೆ. ಅಂಗನವಾಡಿಗಳ ನೊಂದಣಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ವಹಿಸಲಾಗುವುದು ಎಂದರು.
ಬಾಕಿ ಉಳಿದ 2,000 ಶಾಲೆಗಳು ಆಯಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಾರದಲ್ಲಿ ಆಹಾರ ಸುರಕ್ಷತೆ ನೊಂದಣಿ ಮಾಡಿಕೊಳ್ಳಬೇಕು. ಕಾಯ್ದೆ ಅನುಸಾರ ಅಂಗನವಾಡಿಗಳು ಮಹಿಳಾ ಸೇವಾ ಸಂಘಗಳು ನೊಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿವಾಗಿದೆ. ಇದಕ್ಕೆ ಯಾವುದೇ ವಿನಾಯಿತಿ ಇಲ್ಲ. ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾರ ಕಲ್ಯಾಣ ಇಲಾಖೆ ಹಾಸ್ಟೆಲ್ಗಲಳು ಸಹ ಕಡ್ಡಾಯವಾಗಿ ನೊಂದಣಿ ಮಾಡಿಕೊಳ್ಳಬೇಕು. ಇದರ ಜೊತೆಗೆ ಆಹಾರ ಇಲಾಖೆಯ ಎಲ್ಲಾ ನಾಯ್ಯಬೆಲೆ ಅಂಗಡಿಗಳು, ಔಷಧಿ ಅಂಗಡಿಗಳು ನೊಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್.ಟಿ ನಿರ್ದೇಶನ ನೀಡಿದರು.
ನಗರಸಭೆ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಆಹಾರ ಪದಾರ್ಥಗಳ ವ್ಯಾಪಾರಿಗಳಿಗೆ ಪರವಾನಿಗೆ ಹಾಗೂ ಅನುಮತಿ ಪತ್ರ ನೀಡುವ ಮೊದಲು ಆಹಾರ ಸುರಕ್ಷತೆಯ ನೊಂದಣಿ ಮಾಡುವಂತೆ ಷರತ್ತು ವಿಧಿಸಬೇಕು. ನೊಂದಣಿ ಮಾಡಿಕೊಳ್ಳದ ಆಹಾರ ಪದಾರ್ಥಗಳ ವ್ಯಾಪಾರಿಗಳ ಪರವಾನಿಗೆ ರದ್ದು ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟೇಶ್.ಟಿ ಸೂಚನೆ ನೀಡಿದರು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ನಗರಸಭೆ, ಪುರಸಭೆ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳೊಂದಿಗೆ ಕೈ ಜೋಡಿಸಿ ಆಹಾರ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಹೋಟೆಲ್ ಹಾಗೂ ಬೀದಿ ಬದಿಯ ಆಹಾರ ಪದಾರ್ಥಗಳ ಮಾರಾಟ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ನಿಯಮಿತವಾಗಿ ಗುಣಮಟ್ಟ ಹಾಗೂ ಸ್ವಚ್ಛತೆ ಬಗ್ಗೆ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಪ್ರತಿ ಅಂಗನವಾಡಿ ಕಾರ್ಯಕರ್ತೆರ ಆಹಾರ ಸುರಕ್ಷತಾ ನೊಂದಣಿ ಶುಲ್ಕ 100 ರೂ. ಗಳನ್ನು ಬಾಲ ವಿಕಾಸ ಸಮಿತಿಯಿಂದ ಭರಿಸಲಾಗುವುದು. ತಪ್ಪದೇ ಎಲ್ಲಾ ಅಂಗನವಾಡಿಗಳ ನೊಂದಣಿ ಮಾಡಿಸಲು ಕ್ರಮ ವಹಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದರು.
ಜಿಲ್ಲೆಯಲ್ಲಿ ಇದುವರೆಗೂ 7,061 ಆಹಾರ ಸುರಕ್ಷತೆ ನೊಂದಣಿಯಾಗಿವೆ. ಹೊಸದಾಗಿ 2,363 ಅರ್ಜಿಗಳು ನೊಂದಣಿಗಾಗಿ ಸಲ್ಲಿಕೆಯಾಗಿವೆ. ಇದರಲ್ಲಿ 1,030 ನೊಂದಣಿಯಾಗಿವೆ. 1,333 ನೊಂದಣಿ ಪ್ರಗತಿಯಲ್ಲಿದೆ. ಕಳೆದ ಏಪ್ರಿಲ್ 2023 ರಿಂದ ಜನವರಿ 2024 ವರೆಗೆ ಜಿಲ್ಲೆಯಾದ್ಯಂತ 5,776 ಸ್ಥಳ ಭೇಟಿ ಹಾಗೂ ತಪಾಸಣೆ ಕೈಗೊಳ್ಳಲಾಗಿದೆ. 989 ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಆಹಾರ ಸುರಕ್ಷತೆ ಕಾಪಾಡಿಕೊಳ್ಳದ ಹಿನ್ನಲೆಯಲ್ಲಿ 500 ನೋಟಿಸುಗಳನ್ನೂ ನೀಡಲಾಗಿದೆ. 145 ಆಹಾರ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗಿದೆ. 3 ಮಾದರಿಗಳು ಕಲುಷಿತಗೊಂಡಿರುವ ವರದಿ ಬಂದಿವೆ, ಈ ಸಂಸ್ಥೆಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಉಲ್ಲಂಘನೆಯ 27 ಪ್ರಕರಣ ದಾಖಲಿಸಿ ರೂ.44,000 ದಂಡ ವಸೂಲು ಮಾಡಲಾಗಿದೆ. ಪ್ರಸಕ್ತ ಅವಧಿಯಲ್ಲಿ 4 ಪ್ರಕರಣಗಳು ಜಿಲ್ಲಾ ನ್ಯಾಯಾಲಯದಲ್ಲಿದ್ದು, 2013 ರಿಂದ 130 ಪ್ರಕರಣಗಳಲ್ಲಿ 2.61 ಲಕ್ಷ ರೂ. ದಂಡ ವಿಧಿಸಲಾಗಿದೆ. ಜೆಎಂಎಫ್ಸಿಿ ನ್ಯಾಯಾಲಯದಲ್ಲಿ 2013 ರಿಂದ 10 ಪ್ರಕರಣಗಳು ಇದ್ದು, ಇದರಲ್ಲಿ 6 ಪ್ರಕರಣಗಳ ವಿಚಾರಣೆ ಪ್ರಗತಿಯಲ್ಲಿದೆ. 04 ಪ್ರಕರಣಗಳು ಇತ್ಯರ್ಥವಾಗಿವೆ. ಆಹಾರ ಕಲಬೆರಕೆ ಹಾಗೂ ಸುರಕ್ಷತಾ ಮಾನದಂಡ ಉಲ್ಲಂಘನೆ ಅಡಿ ಒಂದು ಪ್ರಕರಣದಲ್ಲಿ ಆರೊಪಿಗೆ ಒಂದು ತಿಂಗಳ ಜೈಲು ಶಿಕ್ಷೆಯಾಗಿದೆ. ಉಳಿದ ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಆಹಾರ ಸುರಕ್ಷತಾ ಅಂಕಿತಾಧಿಕಾರಿ ಡಾ. ಪಾಲಾಕ್ಷ ಸಭೆಗೆ ಮಾಹಿತಿ ನೀಡಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.