i
ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹಿರಿಯೂರು ಜಿಲ್ಲೆಗೆ 1ನೇ ಸ್ಥಾನ ಬರಲು ಶಿಕ್ಷಕರು ಬದ್ಧತೆಯಿಂದ ಕೆಲಸ ಮಾಡಬೇಕು-ಸಚಿವ ಸುಧಾಕರ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: Teachers should work with commitment to get 1st position in Hiriyur district in SSLC exam- Minister Sudhakar…
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ , ಮಕ್ಕಳ ಶೈಕ್ಷಣಿಕ ಪ್ರಗತಿಯ ಜೊತೆಗೆ ಶಾಲೆಯ ಫಲಿತಾಂಶದಲ್ಲೂ ಸಹ ಸುಧಾರಣೆಯಾಗಲು ಶಾಲೆಯ ಶಿಕ್ಷಕರು, ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಹೆಚ್ಚುಹೆಚ್ಚು ಗಮನ ಹರಿಸಬೇಕು ಎಂಬುದಾಗಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ರೋಟರಿ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ಪ್ರೌಢಶಾಲೆಗಳ ಪ್ರಗತಿ ಪರಿಶೀಲನೆ ಹಾಗೂ ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈಗಾಗಲೇ ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದ್ದು, ಅದರಂತೆ ಪ್ರೌಢಶಾಲಾ ಶಿಕ್ಷಕ-ಶಿಕ್ಷಕಿಯರು ಎಸ್ ಎಸ್ ಎಲ್ ಸಿ ಮಕ್ಕಳನ್ನು ಸಿದ್ದಪಡಿಸಬೇಕಿದೆ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಯಾವುದೇ ಕಾರಣಕ್ಕೂ ಮಕ್ಕಳ ಕಲಿಕೆ ಕುಂಠಿತವಾಗಲು ಬಿಡಬಾರದು ಎಂದರು.
ಈ ಕುರಿತು ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಗುಣಪಟ್ಟದ ಶಿಕ್ಷಣ, ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಉತ್ತಮ ಪಡಿಸಲು ಕ್ರಮವಹಿಸಲಾಗಿದೆ, ಶಿಕ್ಷಕರು ವಿವಿಧ ಶೈಕ್ಷಣಿಕ ಚಟುವಟಿಕೆ ಮೂಲಕ ಮಕ್ಕಳ ಕಲಿಕಾಮಟ್ಟ ಹೆಚ್ಚಿಸಲು ಶ್ರಮಿಸುತ್ತಿದ್ದು, ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಮ್ಮ ಜಿಲ್ಲೆ ಹಾಗೂ ತಾಲ್ಲೂಕು ಪ್ರಥಮ ಸ್ಥಾನ ಪಡೆಯಲು ಶಕ್ತಿಮೀರಿ ಶ್ರಮಿಸಲಾಗುವುದು ಎಂಬುದಾಗಿ ಹೇಳಿದರು.
ಸರ್ಕಾರಿ-ಅನುದಾನಿತ ಶಾಲೆಗಳ ಮೂಲಸೌಕರ್ಯ ಅಭಿವೃದ್ದಿಯ ಜೊತೆಗೆ ಹೈಟೆಕ್ ಸ್ಪರ್ಶ ನೀಡಲು ಸರ್ಕಾರದಿಂದ ಅಗತ್ಯ ಅನುದಾನ ನೀಡಲಾಗುವುದು, ಜನ ವಸತಿ ಪ್ರದೇಶದಿಂದ ಹೊರಗಡೆ ಇರುವ ಶಾಲೆಗಳ ಸುರಕ್ಷತೆ-ಭದ್ರತೆಗೆ ಸಿಸಿ ಕ್ಯಾಮರಾ ಅಳವಡಿಸಲು ಕ್ರಮ ವಹಿಸಲಾಗುವುದು ಇಂತಹ ಶಾಲೆಗಳ ಪಟ್ಟಿಯನ್ನು ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಖಾಸಗಿ ಪ್ರೌಢಶಾಲೆಗಳ ಶಿಕ್ಷಕರ ನೇಮಕಾತಿ ವಿಳಂಬದಿಂದ ಶಿಕ್ಷಕರ ಜೀವನ ನಿರ್ವಹಣೆ ಕ?ವಾಗಿದ್ದು, ವೈಯಕ್ತಿಕವಾಗಿ ನೆರವಿನ ಹಸ್ತ ಚಾಚಲಾಗುವುದು ಎಂಬುದಾಗಿ ಭರವಸೆ ನೀಡಿದರು.
ತಾಲೂಕಿನ ವಿವಿಧೆಡೆ ಸರ್ಕಾರಿ-ಅನುದಾನಿತ ಪ್ರೌಢಶಾಲೆಗಳಲ್ಲಿ ಅಗತ್ಯ ಮೂಲ ಸೌಕರ್ಯಗಳ ಕೊರತೆಯಿಂದ ಶೈಕ್ಷಣಿಕ ಪ್ರಗತಿ ಕುಂಠಿತವಾಗಿದೆ ಎಂಬುದಾಗಿ ಮುಖ್ಯಶಿಕ್ಷಕರು ಸಭೆಯ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಸಚಿವರು ಶೀಘ್ರ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಿದರೆ ಮೂಲ ಸೌಕರ್ಯ ಕಲ್ಪಿಸಲು ವಿಶೇ? ಅನುದಾನ ನೀಡಲಾಗುವುದು ಎಂದರು.
ಕಳೆದ ವ? ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಾಲೆಗಳು ಪಡೆದ ಫಲಿತಾಂಶ ,ಪ್ರಸಕ್ತ ಶೈಕ್ಷಣಿಕ ವ?ದ ನಿರೀಕ್ಷಿತ ಫಲಿತಾಂಶ ಕುರಿತು ಮುಖ್ಯ ಶಿಕ್ಷಕರಾದ ಶ್ರೀನಿವಾಸ್ ,ರಂಗನಾಯ್ಕ್, ಶಂಕರ್ ಲಿಂಗಯ್ಯ, ಶ್ರೀನಿವಾಸ್ ರೆಡ್ಡಿ ,ಭಾಗ್ಯಮ್ಮ, ಲೋಹಿತ್, ಅನಿತಾ ಇತರರು ಸಭೆಗೆ ಮಾಹಿತಿ ನೀಡಿದರು.
ಈ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ, ಬಿ.ಆರ್.ಸಿ ತಿಪ್ಪೇರುದ್ರಪ್ಪ, ಶಿಕ್ಷಣ ಸಂಯೋಜಕರಾದ ಶಶಿಧರ್, ಉಪಪ್ರಾಂಶುಪಾಲ ಎಲ್.ನಾಗರಾಜಾಚಾರ್, ಸರ್ಕಾರಿ ನೌಕರರಸಂಘದ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಶಿಕ್ಷಣ ಇಲಾಖೆ ಇತರರು ಉಪಸ್ಥಿತರಿದ್ದರು.