i
ಪೊಲೀಸರ ವಿರುದ್ದ ವಕೀಲರ ಪ್ರತಿಭಟನೆ…
ಚಂದ್ರವಳ್ಳಿ ನ್ಯೂಸ್, ಭದ್ರಾವತಿ:
ವಕೀಲರ ಸಂಘದ 40 ಕ್ಕೂ ಹೆಚ್ಚು ಸದಸ್ಯರ ಮೇಲೆ ಕಾನೂನು ಬಾಹಿರವಾಗಿ ಐನೂರು ಪೋಲಿಸರು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ವಕೀಲರ ಸಂಘದ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿ ತಾಲೂಕು ಕಚೇರಿಗೆ ತೆರಳಿ ತಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ರಾಮನಗರ ಜಿಲ್ಲಾ ವಕೀಲರ ಸಂಘದ ಸದಸ್ಯರಾದ ಚಾಂದ್ ಪಾಷ ರವರು ಕಾಶಿ ಜಿಲ್ಲಾ ನ್ಯಾಯಾಲಯವು ಜ್ಞಾನವ್ಯಾಪಿ ಮಸೀದಿಗೆ ಸಂಬಂಧಿಸಿದ ತೀರ್ಪಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ನ್ಯಾಯಾಂಗ ವ್ಯವಸ್ಥೆಯನ್ನು ನಿಂದಿಸಿದ ಕಾರಣ ಅವರನ್ನು ಸಂಘದಿಂದ ಅಮಾನತ್ತುಗೊಳಿಸಲಾಗಿತ್ತು. ನಂತರ ಅವರು ಸಮಾಜ ಘಾತಕ ವ್ಯಕ್ತಿಗಳ ಜೊತೆಗೂಡಿ ವಕೀಲರ ಮೇಲೆ ಹಲ್ಲೆ ಮಾಡಿದ್ದಾರಲ್ಲದೆ ಐಜೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಲ್ಲಿನ ಪಿಎಸ್ಐ ಸಯ್ಯದ್ ತನ್ವೀರ್ ಹುಸೇನ್ ಉಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸದೆ ಕಾನೂನು ಉಲ್ಲಂಘಿಸಿ ರಾಮನಗರ ಜಿಲ್ಲಾ ವಕೀಲರ ಸಂಘದ ೪೦ ಕ್ಕೂ ಹೆಚ್ಚು ಸದಸ್ಯರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಆದ್ದರಿಂದ ಕೂಡಲೇ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಪಿಎಸ್ಐ ವಿರುದ್ದ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ವಕೀಲರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಹಿರಿಯ ನ್ಯಾಯವಾದಿಗಳು ಭಾಗವಹಿಸಿದ್ದರು.