i
ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್…
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ಯೋಜನೆಯನ್ನು ‘ಅಸಂವಿಧಾನಿಕ’ ಎಂದಿರುವ ಸುಪ್ರೀಂ ಕೋರ್ಟ್, ಅದನ್ನು ರದ್ದುಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.
ಅನಾಮಧೇಯ ಮೂಲಗಳಿಂದ ನಿಧಿ ಸಂಗ್ರಹಕ್ಕೆ ರಾಜಕೀಯ ಪಕ್ಷಗಳಿಗೆ ಅವಕಾಶ ನೀಡಿದ್ದ ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯ ಕಾನೂನು ಸಿಂಧುತ್ವವನ್ನು ಪ್ರಶ್ನಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ತೀರ್ಪು ಪ್ರಕಟಿಸಿದ್ದು, ಎಲ್ಲಾ ನ್ಯಾಯಮೂರ್ತಿಗಳು ಅದಕ್ಕೆ ಸಹಮತ ಸೂಚಿಸಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರು ಸ್ವಲ್ಪ ವಿಭಿನ್ನವಾದ ತರ್ಕದೊಂದಿಗೆ ಸಹಮತದ ಅಭಿಪ್ರಾಯವನ್ನು ಬರೆದಿದ್ದಾರೆ.
ಅನಾಮಧೇಯ ಚುನಾವಣಾ ಬಾಂಡ್ಗಳು ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್ಅಭಿಪ್ರಾಯಪಟ್ಟಿದೆ. ರಾಜಕೀಯ ಪಕ್ಷಗಳಿಗೆ ಆರ್ಥಿಕ ಬೆಂಬಲ ನೀಡುವುದು ಖ್ವಿಡ್ಪ್ರೊ ಪ್ರೊ ಗೆ (ಅಂದರೆ ಒಂದು ಸಹಾಯ ಮಾಡಿದ್ದಕ್ಕಾಗಿ ಇನ್ನೊಂದು ಪ್ರಯೋಜನ ಪಡೆಯುವುದು) ಕಾರಣವಾಗಬಹುದೆಂದೂ ಸುಪ್ರೀಂ ಕೋರ್ಟ್ಹೇಳಿದೆ.
ಕಾಳಧನ ನಿಯಂತ್ರಣಕ್ಕೆ ಚುನಾವಣಾ ಬಾಂಡ್ಯೋಜನೆ ಒಂದೇ ಆಯ್ಕೆಯಲ್ಲ ಎಂದಿರುವ ಸುಪ್ರೀಂ ಕೋರ್ಟ್, ಕಾಳಧನ ನಿಯಂತ್ರಣವೆಂದು ಹೇಳಿಕೊಂಡು ಆರ್ಟಿಐ ಉಲ್ಲಂಘನೆಯಾಗಬಾರದು. ಕಾಳಧನ ನಿಯಂತ್ರಣಕ್ಕೆ ಇತರ ಪರ್ಯಾಯಗಳಿವೆ ಎಂದಿದೆ.