i
17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಪರಾರಿಯಾದ ಯುವಕ…
ಚಂದ್ರವಳ್ಳಿ ನ್ಯೂಸ್, ಚಿಂತಾಮಣಿ:
ಮೇಕೆ ಮೇಯಿಸಲು ಹೋದ ಬಾಲಕಿಯರ ಕೈ-ಕಾಲು ಕಟ್ಟಿ ಅತ್ಯಾಚಾರ ಎಸಗಿ ಆಕೆ ಗರ್ಭಿಣಿ ಮಾಡಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಶಿಂಗಸಂದ್ರ ಗ್ರಾಮದಲ್ಲಿ ನಡೆದಿದೆ.
ಸುರೇಶ್ ಎಂಬಾತ 17 ವರ್ಷದ ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದಾನೆ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.
ಮೇಕೆ ಮೇಯಿಸಲು ಹೋಗತ್ತಿದ್ದ ಬಾಲಕಿಯನ್ನು ಹಿಂಬಾಲಿಸಿ ಕೈ ಕಾಲು ಕಟ್ಟಿ ಅತ್ಯಾಚಾರ ಮಾಡಿದ್ದಾನೆ. ಈ ವಿಷಯವನ್ನು ಹೊರಗೆ ಹೇಳದಂತೆ ಪ್ರಾಣ ಬೆದರಿಕೆ ಯನ್ನು ಹಾಕಿದ್ದಾನೆ.ಅದೇ ಅಲ್ಲದೇ ಮದುವೆ ಆಗುತ್ತಾನೆ ಎಂದು ನಂಬಿಸಿ ಪದೇ ಪದೇ ಆಕೆಯೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ವನ್ನು ಬೆಳೆಸಿದ್ದಾನೆ.
ಬಾಲಕಿ ತನಗೆ ಅರಿವಿಲ್ಲದೆ ಏಳು ತಿಂಗಳ ಗರ್ಭಿಣಿ ಯಾಗಿದ್ದಾಳೆ. ಎಂದು ಆಕೆಯ ಆರೋಗ್ಯ ದಲ್ಲಿ ಏರುಪೇರು ಆಗಿದ್ದಾಗ ಪೋಷಕರು ಗಮನಿಸಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ , ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿ ಎಂದು ತಿಳಿದು ಬಂದಿದೆ. ಆಗ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಸುರೇಶ್ ಕೃತ್ಯವು ಬೆಳಕಿಗೆ ಬಂದಿದೆ. ಇನ್ನೂ ಈ ವಿಷಯ ಬೆಳಕಿಗೆ ಬಂದ ತಕ್ಷಣ ಬಾಲಕಿಯರ ಸಂಬಂಧಿಕರು ಮದುವೆ ಆಗುವಂತೆ ಕೇಳಿದರೆ ಹಣ ಕೊಟ್ಟು ಸೇಟಲ್ ಮೆಂಟ್ ಮಾಡಿಕೊಳ್ಳೋಣ ಎಂದು ಸುರೇಶ್ ಹೇಳಿದ್ದಾನೆ ಎಂದು ಹೇಳಿದರು.
ನಮ್ಮಗೆ ನ್ಯಾಯ ಕೊಡಿಸಿ ಎಂದು ಮಾಧ್ಯಮ ದವರ ಮೂಲಕ ತಮ್ಮ ಕಷ್ಟವನ್ನು ಹೇಳಿಕೊಂಡರು. ಸದ್ಯಕ್ಕೆ ಬಾಲಕಿಯನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಂತರ ಆಕೆಯನ್ನು ಸಾಂತ್ವನ ಕೇಂದ್ರ ಕ್ಕೆ ರವಾನೆ ಮಾಡಲಾಗುತ್ತಿದೆ.
ಇನ್ನೂ ಚಿಂತಾಮಣಿ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪರಾರಿಯಾದ ಯುವಕನನ್ನು ಪೋಲಿಸರು ಹುಡುಕಾಟವನ್ನು ನಡೆಸಿದ್ದಾರೆ ಎಂದು ಹೇಳಲಾಗಿದೆ.